ಆ್ಯಪ್ನಗರ

ಬಾಂಗ್ಲಾ ಸಚಿವರನ್ನು ಗುರಿಯಾಗಿಸಿಕೊಂಡು IS ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಂಭೀರ ಗಾಯ

ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ ಮಂತ್ರಿಯೊಬ್ಬರನ್ನು ಗುರಿಯಾಗಿಸಿಕೊಂಡು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Navbharat Times 1 Sep 2019, 8:19 pm
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮಂತ್ರಿಯೊಬ್ಬರನ್ನು ಗುರಿಯಾಗಿಸಿಕೊಂಡು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ.
Vijaya Karnataka Web isi


ಶನಿವಾರ ರಾತ್ರಿ ಸೈನ್ಸ್ ಲ್ಯಾಬ್ ರಸ್ತೆ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವರ ಕಾರ್ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆ ಉಲ್ಲೇಖಿಸಿ ಅಲ್ಲಿಯ ಮಾಧ್ಯಮಗಳು ವರದಿ ಮಾಡಿವೆ.

ಅದೃಷ್ಟವಶಾತ್, ಬಾಂಗ್ಲಾದೇಶದ ಸಚಿವ ಬಾಲಬಾಲ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ (ಐಎಸ್‌ಐ) ಈ ದಾಳಿಯ ಹೊಣೆ ಹೊತ್ತಿದೆ.

ಸಚಿವರ ಭದ್ರತಾ ಪಡೆ ತಂಡದಲ್ಲಿ ಆರು ಮಂದಿ ಪೊಲೀಸರಿದ್ದರು. ಘಟನೆ ನಡೆದ ಸಮಯದಲ್ಲಿ ಸಚಿವ ಬಾಲಬಾಲ ಅವರು ಬಾಂಗ್ಲಾದೇಶದ ಗಡಿ ಕಾವಲು ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಸಚಿವರ ಕಾರು ಹೋಗುತ್ತಿರುವುದನ್ನು ಗಮನಿಸಿ ಸೈನ್ಸ್ ಲ್ಯಾಬ್ ರಸ್ತೆ ಬಳಿ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಪೋಟಗೊಂಡಿದೆ ಎಂದು ಅಲ್ಲಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಎ ಬಿ ಶಹಾಬುದ್ದೀನ್ ಹೇಳಿಕೊಂಡಿದ್ದಾರೆ.

ಭಯೋತ್ಪಾದಕರು ನಡೆಸಿದ ಸ್ಪೋಟದಲ್ಲಿ ಶಹಾಬುದ್ದೀನ್ ಸೇರಿದಂತೆ ಟ್ರಾಫಿಕ್ ಪೊಲೀಸ್ ಅಮೀನುಲ್ ಇಸ್ಲಾಂ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತದೆ ಎಂದು ಢಾಕಾ ಮೆಟ್ರೋಪಾಲಿಟಿನ್ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ