ಆ್ಯಪ್ನಗರ

ನೇಪಾಳದಲ್ಲಿ ಬಿಮ್‌ಸ್ಟೆಕ್‌ ಶೃಂಗಸಭೆ

ನಾಲ್ಕನೇ ಬಹುಕ್ಷೇತ್ರ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿಯ ಉಪಕ್ರಮ (ಬಿಐಎಂಎಸ್‌ಟಿಇಸಿ-ಬಿಮ್‌ಸ್ಟೆಕ್‌) ಶೃಂಗಸಭೆಯಲ್ಲಿ ಭಾಗವಹಿಸಲು ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಆಗಮಿಸಿದರು.

Vijaya Karnataka 31 Aug 2018, 9:07 am
ಕಾಠ್ಮಂಡು: ನಾಲ್ಕನೇ ಬಹುಕ್ಷೇತ್ರ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿಯ ಉಪಕ್ರಮ (ಬಿಐಎಂಎಸ್‌ಟಿಇಸಿ-ಬಿಮ್‌ಸ್ಟೆಕ್‌) ಶೃಂಗಸಭೆಯಲ್ಲಿ ಭಾಗವಹಿಸಲು ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಆಗಮಿಸಿದರು.
Vijaya Karnataka Web nm


ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ನೇಪಾಳ ಉಪ ಪ್ರಧಾನಿ ಮತ್ತು ರಕ್ಷಣಾ ಸಚಿವ ಈಶ್ವರ್‌ ಪೋಖ್ರೆಲ್‌ ಬರಮಾಡಿಕೊಂಡರು. ಬಳಿಕ ಪ್ರಧಾನಿ ಮೋದಿ ಸೇರಿದಂತೆ ಬಿಐಎಂಎಸ್‌ಟಿಇಸಿ ನಾಯಕರು ನೇಪಾಳ ಅಧ್ಯಕ್ಷೆ ಬಿದ್ಯಾದೇವಿ ಭಂಡಾರಿ ಅವರನ್ನು ಭೇಟಿಯಾಗಿದ್ದು, ಅಧ್ಯಕ್ಷರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡರು. ಬಿಐಎಂಎಸ್‌ಟಿಇಸಿ ದಕ್ಷಿಣ ಏಷ್ಯಾದ ಏಳು ರಾಷ್ಟ್ರಗಳ ಅಂತಾರಾಷ್ಟ್ರೀಯ ಒಕ್ಕೂಟವಾಗಿದ್ದು, ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್‌, ಶ್ರೀಲಂಕಾ, ಥೈಲ್ಯಾಂಡ್‌, ಭೂತಾನ್‌ ಮತ್ತು ನೇಪಾಳ ಇದರ ಸದಸ್ಯ ರಾಷ್ಟ್ರಗಳಾಗಿವೆ. ಬ್ಯಾಂಕಾಕ್‌ ಘೋಷಣೆಯ ಮೂಲಕ 1997ರ ಜೂನ್‌ 6ರಂದು ಬಿಐಎಂಎಸ್‌ಟಿಇಸಿ ಅಸ್ತಿತ್ವಕ್ಕೆ ಬಂದಿದೆ.

ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸಿನಾ ಮತ್ತು ಮ್ಯಾನ್ಮಾರ್‌ ಮುಖ್ಯಸ್ಥ ವಿನ್‌ಮೈಂಟ್‌ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮೋದಿ ಶುಕ್ರವಾರ ಭಾರತಕ್ಕೆ ಮರಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ