ಆ್ಯಪ್ನಗರ

ದಾವೊಸ್‌ನಲ್ಲಿ ಟ್ರಂಪ್ ಭಾಷಣ ಕಾರ್ಯಕ್ರಮ ವೀಕ್ಷಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ದಾವೊಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಮಾವೇಶದಂತಹ ವೇದಿಕೆಗಳು ತಮ್ಮದೇ ಸಂಪನ್ಮೂಲ ಹೊಂದಿಸಲು ಅಡಚಣೆ ಇರುವ ರಾಜ್ಯಗಳಿಗೆ ಅತಿ ಅಗತ್ಯ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅಭಿಪ್ರಾಯಪಟ್ಟರು.

Vijaya Karnataka Web 21 Jan 2020, 9:25 pm
ದಾವೊಸ್: ಸ್ವಿಟ್ಜರ್ಲೆಂಡಿನ ದಾವೊಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು ನೀಡಿ: ದಾವೊಸ್‌ ಹೂಡಿಕೆದಾರರಿಗೆ ಬಿಎಸ್‌ವೈ ಮನವಿ

ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಒಳಗೊಂಡಂತೆ ಪೂರ್ಣ ಪ್ರಮಾಣದ ನಿಯೋಗದೊಂದಿಗೆ ಪಾಲ್ಗೊಂಡ ಮೊದಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು. 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕ ಸರಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯೆಲ್, ಕೇಂದ್ರ ಹಡಗು ಸಾರಿಗೆ ಖಾತೆ ರಾಜ್ಯ ಸಚಿವ ಮನ್ ಸುಖ್ ಮಾಂಡವೀಯ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಭೆಯ ನಂತರ ಟ್ರಂಪ್ ಅವರ ಭಾಷಣದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಟ್ರಂಪ್ ಅವರ ಭಾಷಣ, ಸರಿಯಾದ ದಿಕ್ಕಿನಲ್ಲಿದ್ದರೂ, ತಮ್ಮ ದೇಶದ ಆರ್ಥಿಕತೆಯ ಕುರಿತು ಅವರು ಗಮನ ಕೇಂದ್ರೀಕರಿಸಿದರು. ಆದರೆ ಯಾವುದೇ ದೇಶದ ನಾಯಕನ ದೃಷ್ಟಿಯಿಂದ ಇದು ಸಹಜ” ಎಂದು ಅಭಿಪ್ರಾಯಪಟ್ಟರು.

ಟ್ರಂಪ್ ಅವರು ವರ್ಲ್ಡ್ ಎಕನಾಮಿಕ್ ಫೋರಂ ಹೂಡಿಕೆದಾರರು ಹಾಗೂ ವ್ಯಾಪಾರಸ್ಥರಿಗೆ ತಮ್ಮ ವಹಿವಾಟು ವಿಸ್ತರಿಸಲು ವೇದಿಕೆಯಾಗಿದೆ. ಅಂತೆಯೇ ರಾಜಕೀಯ ನಾಯಕರಿಗೆ ತಮ್ಮ ರಾಜ್ಯ ಮತ್ತು ದೇಶಕ್ಕೆ ಹೂಡಿಕೆದಾರರನ್ನು ಆಹ್ವಾನಿಸುವ ಮೂಲಕ ತಮ್ಮ ದೇಶದ ಆರ್ಥಿಕತೆಯನ್ನು ವೃದ್ಧಿಸಲು ಉತ್ತಮ ಅವಕಾಶವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಹೂಡಿಕೆಗಳು ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಯುವಕರಿಗೆ ಉದ್ಯೋಗ ಒದಗಿಸುತ್ತವೆ. ಉದ್ಯೋಗ ಸೃಷ್ಟಿಯ ನಮ್ಮ ಗುರಿ ಈಡೇರಲು ಹೂಡಿಕೆಯ ಅಗತ್ಯವಿದೆ. ಇಂತಹ ಅವಕಾಶಗಳು ರಾಜ್ಯದ ಆರ್ಥಿಕತೆ ವೃದ್ಧಿಗೆ ಪೂರಕವಾಗಿವೆ ಎಂದು ಯಡಿಯೂರಪ್ಪ ತಿಳಿಸಿದರು.

ಕೇವಲ ಎರಡು-ಮೂರು ಸಾವಿರ ಜನಸಂಖ್ಯೆಯ ಈ ಪುಟ್ಟ ಗ್ರಾಮದಲ್ಲಿ ಮೈನಸ್ 9 ಡಿಗ್ರಿ ಸೆಲ್ಸಿಯಸ್ ಚಳಿಯನ್ನೂ ಲೆಕ್ಕಿಸದೆ ಮುಖ್ಯಮಂತ್ರಿ ಯಡಿಯೂರಪ್ಪ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಉತ್ಸಾಹದಿಂದ ಸರಣಿ ಸಭೆಗಳನ್ನು ನಡೆಸುತ್ತಿರುವುದು ಇತರರಿಗೆ ಅಚ್ಚರಿದಾಯಕವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ