ಆ್ಯಪ್ನಗರ

ಕೊರೊನಾ ವೈರಸ್ ಹುಟ್ಟಿದ್ದು ಭಾರತದಲ್ಲಂತೆ: ಚೀನಿ ಸಂಶೋಧಕರಿಂದ 'ಬಿಗ್ ಜೋಕ್'!

ಮಾರಕ ಕೊರೊನಾ ವೈರಸ್ ಹುಟ್ಟಿದ್ದು ಭಾರತದಲ್ಲಿ ಎಂದು ಚೀನಿ ಸಂಶೋಧಕರು ವಾದಿಸಿದ್ದು, ಅವರ ಈ ಹೇಳಿಕೆ ಜಾಗತಿಕವಾಗಿ ತೀವ್ರ ಟೀಕೆಗೆ ಗುರಿಯಾಗಿದೆ. ಭಾರತದಲ್ಲಿ2 019ರ ಬೇಸಿಗೆಯಲ್ಲಿ ಕೊರೊನಾ ವೈರಾಣು ಕಂಡುಬಂದಿದೆ ಎಂದು ಚೈನೀಸ್‌ ಅಕಾಡೆಮಿ ಸೈನ್ಸಸ್‌ನ ವಿಜ್ಞಾನಿಗಳು ಹೇಳಿದ್ದಾರೆ.

Vijaya Karnataka Web 29 Nov 2020, 7:46 am
ಬೀಜಿಂಗ್: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾದ ಉದಾಸೀನತೆಯೇ ಕಾರಣ ಎಂಬುದು ಇಡೀ ಜಗತ್ತಿಗೆ ಗೊತ್ತಿರುವ ಸಂಗತಿ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದೇ ರಾಷ್ಟ್ರಗಳಿಂದ ದೂರವಾಗುತ್ತಿದೆ.
Vijaya Karnataka Web Xi-Jinping-gertty
ಸಂಗ್ರಹ ಚಿತ್ರ


ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಹೆಗಲೇರಿಸಲು ಇದಿಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಡ್ರ್ಯಾಗನ್ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ.

ಹೌದು, ಮಾರಕ ಕೊರೊನಾ ವೈರಸ್ ಹುಟ್ಟಿದ್ದು ಭಾರತದಲ್ಲಿ ಎಂದು ಚೀನಿ ಸಂಶೋಧಕರು ವಾದಿಸಿದ್ದು, ಅವರ ಈ ಹೇಳಿಕೆ ಜಾಗತಿಕವಾಗಿ ತೀವ್ರ ಟೀಕೆಗೆ ಗುರಿಯಾಗಿದೆ.

ಭಾರತ ವಿಮಾನಗಳಿಗೆ ಚೀನಾ ನಿರ್ಬಂಧ

ಕೊರೊನಾ ವೈರಾಣುವಿನ ಮೂಲ ಭಾರತ ಎಂದು ಚೀನಾ ಆರೋಪಿಸಿದೆ. ಭಾರತದಲ್ಲಿ2 019ರ ಬೇಸಿಗೆಯಲ್ಲಿ ಕೊರೊನಾ ವೈರಾಣು ಕಂಡುಬಂದಿದೆ. ಅಲ್ಲಿಂದ ಪ್ರಾಣಿಗಳ ಮೂಲಕ ವುಹಾನ್‌ಗೆ ರವಾನೆಯಾಗಿದೆ ಎಂದು ಚೈನೀಸ್‌ ಅಕಾಡೆಮಿ ಸೈನ್ಸಸ್‌ನ ವಿಜ್ಞಾನಿಗಳು ಹೇಳಿದ್ದಾರೆ.

ದೊಡ್ಡ ಪ್ರಮಾಣದಲ್ಲಿಸೋಂಕಿತರು ಪತ್ತೆಯಾಗಿದ್ದರಿಂದ ವುಹಾನ್‌ ಈ ಸೋಂಕಿನ ಮೂಲವೆಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಅಸಲಿಗೆ ಕೊರೊನಾ ಹುಟ್ಟಿದ್ದು ಭಾರತದಲ್ಲಿ ಎಂದು ಚೈನೀಸ್‌ ಅಕಾಡೆಮಿ ಸೈನ್ಸಸ್‌ನ ವಿಜ್ಞಾನಿಗಳು ಆರೋಪಿಸಿದ್ದಾರೆ.

'ಜಾಗತಿಕ ಅಪರಾಧ'ಕ್ಕೆ ಚೀನಾ ಭಾರೀ ಬೆಲೆ ತೆರಬೇಕು: ತಣಿಯದ ಡೊನಾಲ್ಡ್ ಟ್ರಂಪ್ ಕೊರೊನಾ ಆಕ್ರೋಶ!

ಚೀನಾಗೆ ಜಾಗತಿಕ ತಜ್ಞರ ತರಾಟೆ:

ಇನ್ನು ಚೀನಿ ಸಂಶೋಧಕರ ಅಭಿಪ್ರಾಯವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಗ್ಲಾಸ್ಗೋ ವಿಶ್ವವಿದ್ಯಾಲಯದ ತಜ್ಞ ಡೇವಿಡ್ ರಾಬರ್ಟ್ಸನ್, ಚೀನಾದ ಸಂಶೋಧಕರು ಪ್ರಸ್ತಾಪಿಸಿದ ಸಿದ್ಧಾಂತ ಬಹಳ ದೋಷಪೂರಿತ ಎಂದು ಹರಿಹಾಯ್ದಿದ್ದಾರೆ.

ಚೀನಿ ಸಂಶೋಧಕರು ಭಾರತವೂ ಸೇರಿದಂತೆ ಬೇರೆ ರಾಷ್ಟ್ರಗಳ ಮೇಲೆ ಅಪವಾದ ಹೊರಿಸುವುದನ್ನು ಬಿಟ್ಟು, ವೈರಾಣು ಹರಡಲು ಕಾರಣವಾದ ನೈಜ ಸಂಗತಿಗಳತ್ತ ಗಮನಹರಿಸಲಿ ಎಂದು ಡೇವಿಡ್ ರಾಬರ್ಟ್ಸನ್ ವ್ಯಂಗ್ಯವಾಡಿದ್ದಾರೆ.

ಭಾರತದಲ್ಲಿ ಮತ್ತೊಂದು ಚೀನಾ ವೈರಸ್‌ ಆತಂಕ..! ಹೊಸ ಸಿಕ್ಯೂವಿ ಸೋಂಕಿನ ಬಗ್ಗೆ ವಿಜ್ಞಾನಿಗಳ ಎಚ್ಚರಿಕೆ

ಈ ಹಿಂದೆ ಇಟಲಿ, ಅಮೆರಿಕ ಮತ್ತು ಯುರೋಪ್‌ ವಿರುದ್ಧವೂ ಚೀನಾ ಇಂತಹುದೇ ಆಧಾರ ಮಾಡಿ, ಅದನ್ನು ಸಮರ್ಥಿಸಿಕೊಳ್ಳಲು ಆಧಾರಗಳಿಲ್ಲದೇ ಜಾಗತಿಕವಾಗಿ ತಲೆ ತಗ್ಗಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ