ಜಿನೆವಾ: ಕೊರೊನಾ ಸೋಂಕು ನಿಭಾಯಿಸಲು ವಿಶ್ವದ ಎಲ್ಲ ರಾಷ್ಟ್ರಗಳು ಕಷ್ಟ ಪಡುತ್ತಿವೆ. ಕೊರೊನಾ ನಿಯಂತ್ರಿಸುವಲ್ಲಿ ಸಾಕಷ್ಟು ಗೊಂದಲಗಳಿವೆ. ಮನುಷ್ಯರ ಬೇಜವಾಬ್ದಾರಿತನದಿಂದಾಗಿ ಸಾಂಕ್ರಾಮಿಕ ಅಂತ್ಯಗೊಳ್ಳಲು ನಾವು ಇನ್ನೂ ಬಹು ದೂರ ಕ್ರಮಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ ನೀಡಿದ್ದಾರೆ.
ಅತ್ಯಾಧುನಿಕ ವೈದ್ಯಕೀಯ ಕ್ರಮಗಳ ಮೂಲಕ ಕೆಲ ತಿಂಗಳ ಅವಧಿಯಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸಬಹುದು. ಈ ವರ್ಷದ ಮೊದಲ ಎರಡು ತಿಂಗಳ ಅಂಕಿ ಅಂಶ ನೋಡಿದರೆ ಅದು ಅರ್ಥವಾಗುತ್ತದೆ. ಕಳೆದ ಎರಡು ತಿಂಗಳಲ್ಲಿ ವಿಶ್ವದಲ್ಲಿ ಸಾವು, ಹೊಸ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಈ ಮೂಲಕ ಸೋಂಕನ್ನು ನಿಯಂತ್ರಿಸಬಹುದು ಹಾಗೂ ರೂಪಾಂತರಿ ತಳಿಯನ್ನು ತಡೆಯಬಹುದು ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 9ರಷ್ಟು ಹೆಚ್ಚಳ, ಸಾವುಗಳಲ್ಲಿ ಶೇ. 5ರಷ್ಟು ಹೆಚ್ಚಳ ಕಂಡುಬಂದಿದೆ. ಕೆಲವು ದೇಶಗಳಲ್ಲಿ ಕೊರೊನಾ ಹೆಚ್ಚಾಗಿದ್ದರೂ, ನೈಟ್ ಕ್ಲಬ್, ರೆಸ್ಟೋರೆಂಟ್ ಹಾಗೂ ಮಾರುಕಟ್ಟೆಗಳು ಜನಸಂದಣಿಯಿಂದ ಕೂಡಿವೆ. ಜನರ ಬೇಜವ್ದಾರಿತನ ತೊಲಗಬೇಕು ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರವೂ ಹಲವು ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಸಂಶೋಧನೆ ಹೇಳುತ್ತದೆ. ಕೊರೋನಾ ಸೋಂಕಿನಿಂದ ಚೇತರಿಸಿಕೊಳ್ಳುವ ಪ್ರತಿ ಮೂವರಲ್ಲಿ ಒಬ್ಬರು ನರ ಸಮಸ್ಯೆಗಳು ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಕೊರೋನಾ ಸೋಂಕು ತಗುಲಿದ ಮೊದಲ ಆರು ತಿಂಗಳಲ್ಲಿ ಸುಮಾರು ಶೇ. 34ರಷ್ಟು ಮಂದಿಯ ಮೇಲೆ ಪ್ರಭಾವ ಉಂಟಾಗಿದೆ.
ಕೊರೋನಾದಿಂದ ಚೇತರಿಸಿಕೊಂಡ ಶೇ. 17 ಮಂದಿಯಲ್ಲಿ ಆತಂಕ ಶೇ. 14ರಷ್ಟು ಜನರಲ್ಲಿ ಮೂಡ್ ಬದಲಾವಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ. 13ರಷ್ಟು ಜನರು ಮೊದಲ ಬಾರಿಗೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಸೆರೆಬ್ರಲ್ ರಕ್ತಸ್ರಾವ ಶೇ.0.6 ಪಾರ್ಶ್ವವಾಯು ಶೇ.2.1 ಹಾಗೂ ಮರೆವು ಶೇ. 0.7 ರಷ್ಟು ಮಂದಿಯಲ್ಲಿ ಕಂಡುಬರುತ್ತದೆ ಎಂದು ಸಂಶೋಧನೆ ಹೇಳಿದೆ. ಜ್ವರ ಮತ್ತು ಇತರ ಉಸಿರಾಟದ ಸೋಂಕುಗಳಿಗಿಂತ ಕೊರೊನಾ ಹೆಚ್ಚು ಅಪಾಯಕಾರಿ ಎಂದು ಸಂಶೋಧಕರು ಹೇಳುತ್ತಾರೆ.
ಅತ್ಯಾಧುನಿಕ ವೈದ್ಯಕೀಯ ಕ್ರಮಗಳ ಮೂಲಕ ಕೆಲ ತಿಂಗಳ ಅವಧಿಯಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸಬಹುದು. ಈ ವರ್ಷದ ಮೊದಲ ಎರಡು ತಿಂಗಳ ಅಂಕಿ ಅಂಶ ನೋಡಿದರೆ ಅದು ಅರ್ಥವಾಗುತ್ತದೆ. ಕಳೆದ ಎರಡು ತಿಂಗಳಲ್ಲಿ ವಿಶ್ವದಲ್ಲಿ ಸಾವು, ಹೊಸ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಈ ಮೂಲಕ ಸೋಂಕನ್ನು ನಿಯಂತ್ರಿಸಬಹುದು ಹಾಗೂ ರೂಪಾಂತರಿ ತಳಿಯನ್ನು ತಡೆಯಬಹುದು ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 9ರಷ್ಟು ಹೆಚ್ಚಳ, ಸಾವುಗಳಲ್ಲಿ ಶೇ. 5ರಷ್ಟು ಹೆಚ್ಚಳ ಕಂಡುಬಂದಿದೆ. ಕೆಲವು ದೇಶಗಳಲ್ಲಿ ಕೊರೊನಾ ಹೆಚ್ಚಾಗಿದ್ದರೂ, ನೈಟ್ ಕ್ಲಬ್, ರೆಸ್ಟೋರೆಂಟ್ ಹಾಗೂ ಮಾರುಕಟ್ಟೆಗಳು ಜನಸಂದಣಿಯಿಂದ ಕೂಡಿವೆ. ಜನರ ಬೇಜವ್ದಾರಿತನ ತೊಲಗಬೇಕು ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರವೂ ಹಲವು ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಸಂಶೋಧನೆ ಹೇಳುತ್ತದೆ. ಕೊರೋನಾ ಸೋಂಕಿನಿಂದ ಚೇತರಿಸಿಕೊಳ್ಳುವ ಪ್ರತಿ ಮೂವರಲ್ಲಿ ಒಬ್ಬರು ನರ ಸಮಸ್ಯೆಗಳು ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಕೊರೋನಾ ಸೋಂಕು ತಗುಲಿದ ಮೊದಲ ಆರು ತಿಂಗಳಲ್ಲಿ ಸುಮಾರು ಶೇ. 34ರಷ್ಟು ಮಂದಿಯ ಮೇಲೆ ಪ್ರಭಾವ ಉಂಟಾಗಿದೆ.
ಕೊರೋನಾದಿಂದ ಚೇತರಿಸಿಕೊಂಡ ಶೇ. 17 ಮಂದಿಯಲ್ಲಿ ಆತಂಕ ಶೇ. 14ರಷ್ಟು ಜನರಲ್ಲಿ ಮೂಡ್ ಬದಲಾವಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ. 13ರಷ್ಟು ಜನರು ಮೊದಲ ಬಾರಿಗೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಸೆರೆಬ್ರಲ್ ರಕ್ತಸ್ರಾವ ಶೇ.0.6 ಪಾರ್ಶ್ವವಾಯು ಶೇ.2.1 ಹಾಗೂ ಮರೆವು ಶೇ. 0.7 ರಷ್ಟು ಮಂದಿಯಲ್ಲಿ ಕಂಡುಬರುತ್ತದೆ ಎಂದು ಸಂಶೋಧನೆ ಹೇಳಿದೆ. ಜ್ವರ ಮತ್ತು ಇತರ ಉಸಿರಾಟದ ಸೋಂಕುಗಳಿಗಿಂತ ಕೊರೊನಾ ಹೆಚ್ಚು ಅಪಾಯಕಾರಿ ಎಂದು ಸಂಶೋಧಕರು ಹೇಳುತ್ತಾರೆ.