ಆ್ಯಪ್ನಗರ

ಜನಾಂಗೀಯ ದ್ವೇಷದಲ್ಲಿ ಹತ್ಯೆ ಆರೋಪ, ಅಮೆರಿಕಾದಲ್ಲಿ ಭುಗಿಲೆದ್ದ ಆಕ್ರೋಶ

ಕಪ್ಪು ವರ್ಣದ ವ್ಯಕ್ತಿಯ ಮೇಲೆ ಪೊಲೀಸ್ ದೌರ್ಜನ್ಯ ಹಾಗೂ ಸಾವು ಪ್ರಕರಣ ಅಮೆರಿಕಾದಲ್ಲಿ ಅಲ್ಲೋಕ ಕಲ್ಲೋಲವನ್ನು ಸೃಷ್ಟಿಸಿದೆ. ಪೊಲೀಸರ ವರ್ತನೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ.

Agencies 31 May 2020, 12:13 pm
ಮಿನ್ನಿಯಾಪೊಲೀಸ್: ಕೊರೊನಾ ಅಟ್ಟಹಾಸದ ನಡುವೆ ಅಮೆರಿಕಾದಲ್ಲಿ ಕಪ್ಪು ವರ್ಣೀಯ ಜಾರ್ಜ್‌ ಫ್ಲಾಯ್ಡ್ ಸಾವು ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಾವಿಗೆ ಕಾರಣವಾದ ಪೊಲೀಸರ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಹಿಂಸಾಚಾರಕ್ಕೆ ತಿರುಗಿದೆ. ಮಿನ್ನಿಯಾಪೊಲೀಸ್ ನಗರದಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದ್ದು ಇದನ್ನು ಮೀರಿ ಪ್ರತಿಭಟನಾಕಾರರು ರಸ್ತೆಗಿಳಿದಿದ್ದಾರೆ.
Vijaya Karnataka Web usa


ಪೊಲೀಸರ ವರ್ತನೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಮಿನ್ನಿಯಾನಗರವನ್ನು ದಾಟಿ ಬೇರೆ ಕಡೆಗಳಲ್ಲೂ ಆರಂಭಗೊಳ್ಳುತ್ತಿದೆ. ಕೊರೊನಾ ಅಟ್ಟಹಾಸ ನಡುವೆಯೂ ಜನಾಂಗೀಯ ದ್ವೇಷದ ವಿರುದ್ಧ ಅಮೆರಿಕನ್ನರು ರಸ್ತೆಗಿಳಿದಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು ಈ ನಡುವೆ ಅಪರಿಚಿತ ವ್ಯಕ್ತಿಯೊಬ್ಬನ ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ.

G7 ಶೃಂಗಸಭೆಗೆ ಭಾರತವನ್ನು ಆಹ್ವಾನಿಸಲಿರುವ ಟ್ರಂಪ್: ಸದ್ಯದ ಜಗತ್ತು ಪ್ರತಿನಿಧಿಸಲಿ ಎಂದ ಅಧ್ಯಕ್ಷ!

ಕಪ್ಪು ವರ್ಣೀಯ ಜಾರ್ಜ್‌ ಫ್ಲಾಯ್ಡ್ ಎಂಬ ವ್ಯಕ್ತಿಯ ವಿರುದ್ಧ ಪೊಲೀಸ್ ಅಧಿಕಾರಿ ಡೆರಿಕ್‌ ಚೌವಿನ್‌ ಕ್ರೌರ್ಯ ಮೆರೆದಿದ್ದ. ಕುತ್ತಿಗೆಯ ಮೇಲೆ ಬಲವಾಗಿ ಮಂಡಿಯೂರಿದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಪೊಲೀಸರ ಈ ನಡೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಪೊಲೀಸರು ಜನಾಂಗೀಯ ದ್ವೇಷವನ್ನು ಸಾಧಿಸಿದ್ದಾರೆ ಎಂದು ಆರೋಪಿಸಿ ಭಾರೀ ಸಂಖ್ಯೆಯ ಪ್ರತಿಭಟನಾಕಾರರು ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆ ಹಿಂಸೆಯ ಸ್ವರೂಪವನ್ನು ಪಡೆದುಕೊಂಡಿದೆ. ಹಲವು ಕಡೆಗಳಲ್ಲಿ ವಾಹನಗಳಿಗೆ ಬೆಂಕಿ ನೀಡಲಾಗಿದ್ದು, ಗಲಭೆಯನ್ನು ನಿಯಂತ್ರಣ ಮಾಡಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ಸಮಸ್ಯೆ ನಮ್ಮ ನಡುವೆ ಇರುವಾಗ ನೀವೇಕೆ ಬಗೆಹರಿಸುವಿರಿ?: ಟ್ರಂಪ್ ಮಧ್ಯಸ್ಥಿಕೆ ಆಫರ್ ತಿರಸ್ಕರಿಸಿದ ಚೀನಾ!

ವ್ಯಕ್ತಿಯ ವಿರುದ್ಧ ಕ್ರೌರ್ಯ ಮೆರೆದ ಪೊಲೀಸ್ ಅಧಿಕಾರಿ ಡೆರಿಕ್‌ ಚೌವಿನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಬಂಧನಕ್ಕೆ ಒಳಪಡಿಸಲಾಗಿದೆ. ಆದರೆ ಆತನ ಜೊತೆಗಿದ್ದ ಇತರ ಅಧಿಕಾರಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅಮೆರಿಕಾದಲ್ಲಿ ಕಪ್ಪು ವರ್ಣೀಯರ ಮೇಲಿನ ದೌರ್ಜನ್ಯ ಪ್ರಕರಣಗಳು ಸಾಕಷ್ಟು ನಡೆಯುತ್ತಿವೆ. ಇದರ ವಿರುದ್ಧ ಹೋರಾಟಗಳು ನಡೆಯುತ್ತಿದೆ. ಇದೀಗ ಕೊರೊನಾ ಅಟ್ಟಹಾಸದ ನಡುವೆಯೂ ಜನಾಂಗೀಯ ದ್ವೇಷ ಪ್ರಕರಣ ಮುನ್ನಲೆಗೆ ಬಂದಿದ್ದು ಹಿಂಸೆಯ ಸ್ವರೂಪ ಪಡೆದುಕೊಂಡು ಆತಂಕಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ