ಆ್ಯಪ್ನಗರ

ಗಿಲ್ಗಿಟ್‌- ಬಾಲ್ಟಿಸ್ತಾನ ಖಾಲಿ ಮಾಡಿ, ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶ

​ಗಿಲ್ಗಿಟ್‌- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬಹುದು ಎಂದು 2018ರಲ್ಲಿ ಪಾಕ್‌ ಸರಕಾರ ಮಾಡಿದ್ದ ಸಂವಿಧಾನ ತಿದ್ದುಪಡಿಗೆ ಅಲ್ಲಿನ ಸುಪ್ರೀಂ ಕೋರ್ಟ್‌ ಅನುಮೋದನೆ ನೀಡಿದೆ. ಇದಕ್ಕೆ ಭಾರತ ತಿರುಗೇಟು ನೀಡಿದ್ದು, ಅಕ್ರಮವಾಗಿ ವಶಪಡಿಸಿಕೊಂಡ ಪ್ರದೇಶಗಳ ಮೇಲೆ ಪಾಕ್‌ಗೆ ಹಕ್ಕಿಲ್ಲ ಎಂದು ಪ್ರತಿಪಾದಿಸಿದೆ.

Agencies 4 May 2020, 11:22 pm
ಹೊಸದಿಲ್ಲಿ: ಪಾಕ್‌ ಆಕ್ರಮಿತ ಕಾಶ್ಮೀರದ ಗಿಲ್ಗಿಟ್‌ ಮತ್ತು ಬಾಲ್ಟಿಸ್ತಾನವು ಭಾರತದ ಅವಿಭಾಜ್ಯ ಅಂಗಗಳಾಗಿದ್ದು, ಪಾಕಿಸ್ತಾನ ಕೂಡಲೇ ಈ ಪ್ರದೇಶಗಳನ್ನು ಖಾಲಿ ಮಾಡಬೇಕೆಂದು ಭಾರತ ಖಡಕ್‌ ಎಚ್ಚರಿಕೆ ನೀಡಿದೆ. ಇದೇ ವೇಳೆ, ಗಿಲ್ಗಿಟ್‌ ಮತ್ತು ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತ ತೀವ್ರ ಪ್ರತಿಭಟನೆ ದಾಖಲಿಸಿದೆ. ಪಾಕ್‌ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಭಾರತ ಇಷ್ಟು ನೇರ ಸಂದೇಶ ನೀಡಿರುವುದು ಇದೇ ಮೊದಲು.
Vijaya Karnataka Web Gilgit Baltistan


ಗಿಲ್ಗಿಟ್‌- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬಹುದು ಎಂದು 2018ರಲ್ಲಿ ಪಾಕ್‌ ಸರಕಾರ ಮಾಡಿದ್ದ ಸಂವಿಧಾನ ತಿದ್ದುಪಡಿಗೆ ಅಲ್ಲಿನ ಸುಪ್ರೀಂ ಕೋರ್ಟ್‌ ಅನುಮೋದನೆ ನೀಡಿದೆ. ಇದಕ್ಕೆ ತಿರುಗೇಟು ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, "ಅಕ್ರಮವಾಗಿ ವಶಪಡಿಸಿಕೊಂಡಿರುವ ಗಡಿ ಭಾಗಗಳ ಮೇಲೆ ಪಾಕಿಸ್ತಾನದ ಸರಕಾರಕ್ಕಾಗಲೀ ಅಲ್ಲಿನ ನ್ಯಾಯಾಂಗಕ್ಕಾಗಲೀ ಯಾವುದೇ ಹಕ್ಕಿಲ್ಲ. ಈ ಪ್ರದೇಶಗಳಲ್ಲಿಆಡಳಿತಾತ್ಮಕ ಹಾಗೂ ಇತರೆ ಯಾವುದೇ ಮಹತ್ತರ ಬದಲಾವಣೆಗಳನ್ನು ತರುವ ಅಧಿಕಾರವನ್ನು ಪಾಕ್‌ ಸರಕಾರ ಹೊಂದಿಲ್ಲ" ಎಂದು ಆ ದೇಶದ ರಾಯಭಾರಿಗೆ ಕಳುಹಿಸಿದ ಖಡಕ್‌ ಸಂದೇಶದಲ್ಲಿ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಜಮ್ಮು- ಕಾಶ್ಮೀರ ರಾಜ್ಯವನ್ನು ಎರಡು ಭಾಗವಾಗಿ ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ ನಂತರ, ನವಂಬರ್‌ನಲ್ಲಿ ಹೊಸ ರಾಜಕೀಯ ನಕ್ಷೆಯನ್ನು ಭಾರತ ಬಿಡುಗಡೆ ಮಾಡಿತ್ತು. ಅದರಲ್ಲಿ ಗಿಲ್ಗಿಟ್‌- ಬಾಲ್ಟಿಸ್ತಾನವನ್ನು ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಭಾಗವಾಗಿ, ಉಳಿದ ಪಾಕ್‌ ಆಕ್ರಮಿತ ಪ್ರದೇಶ (ಪಿಒಕೆ) ವನ್ನು ಕಾಶ್ಮೀರದ ಭಾಗವಾಗಿ ಭಾರತ ತೋರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ