ಆ್ಯಪ್ನಗರ

ಮೋದಿ ಮೋಡಿ, ಕಾಶ್ಮೀರ ವಿಚಾರದಲ್ಲಿ ಪಾಕ್‌ ಪ್ರಯತ್ನ ವಿಫಲ, ಅಂತಾರಾಷ್ಟ್ರೀಯ ಒತ್ತಡವಿಲ್ಲ ಎಂದು ಇಮ್ರಾನ್‌ ಬೇಸರ

ಜಮ್ಮು ಕಾಶ್ಮೀರದಲ್ಲಿ 370ನೇ ರದ್ದು ಪಡಿಸಿದಾಗಿನಿಂದ ಭಾರತದ ವಿರುದ್ಧ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌, ಇದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾಪಿಸಲು ಹೋಗಿ ಮುಖಭಂಗಕ್ಕೊಳಗಾಗಿದ್ದಾರೆ.

Vijaya Karnataka Web 25 Sep 2019, 10:20 pm
ನ್ಯೂಯಾರ್ಕ್: ಜಮ್ಮು-ಕಾಶ್ಮೀರ ವಿಚಾರವನ್ನು ಜಾಗತಿಕ ಮಟ್ಟದ ವಿಚಾರವನ್ನಾಗಿಸುವಲ್ಲಿಪಾಕಿಸ್ತಾನ ನಡೆಸಿದ ಪ್ರಯತ್ನಗಳು ವಿಫಲವಾಗಿವೆ ಎಂದು ಪ್ರಧಾನಿ ಇಮ್ರಾನ್‌ ಖಾನ್‌ ಒಪ್ಪಿಕೊಂಡಿದ್ದಾರೆ.
Vijaya Karnataka Web ಇಮ್ರಾನ್‌ ಖಾನ್
ಇಮ್ರಾನ್‌ ಖಾನ್


370ನೇ ವಿಧಿ ರದ್ದು ಬಳಿಕ ಹಲವು ಜಾಗತಿಕ ವೇದಿಕೆಗಳಲ್ಲಿಭಾರತದ ವಿರುದ್ಧ ದೂರು ನೀಡಲು ಯತ್ನಿಸಿದರೂ, ಅಲ್ಲೆಲ್ಲಾಭಾರತಕ್ಕೆ ಬೆಂಬಲ ದೊರೆತ ಹಿನ್ನೆಲೆಯಲ್ಲಿಇಮ್ರಾನ್‌ ಖಾನ್‌ ಅಸಹಾಯಕತೆ ಮತ್ತು ಹತಾಶೆ ವ್ಯಕ್ತಪಡಿಸಿದ್ದಾರೆ.

''ಅಂತಾರಾಷ್ಟ್ರೀಯ ಸಮುದಾಯದ ನಡೆಯಿಂದ ನನಗೆ ನಿರಾಸೆಯಾಗಿದೆ. ಪ್ರಧಾನಿ ಮೋದಿ ಅವರ ಮೇಲೆ ಇನ್ನೂ ಜಾಗತಿಕ ಸಮುದಾಯ ಒತ್ತಡ ಹೇರುತ್ತಿಲ್ಲ. ಆದರೆ ಪಾಕಿಸ್ತಾನ ಮಾತ್ರ ತನ್ನ ಪ್ರಯತ್ನವನ್ನು ಮುಂದುವರಿಸಲಿದೆ'' ಎಂದು ಇಮ್ರಾನ್‌ ಹೇಳಿದ್ದಾರೆ.

''ಭಾರತದ ಆರ್ಥಿಕ ಸ್ಥಿತಿಗತಿ ಮತ್ತು ಜಾಗತಿಕ ಪ್ರಾಬಲ್ಯದ ಹಿನ್ನೆಲೆಯೂ ಜಾಗತಿಕ ಸಮುದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿಯೇ ಕಾಶ್ಮೀರ ವಿಚಾರವಾಗಿ ಪಾಕಿಸ್ತಾನದ ಅಳಲು ಅಂತಾರಾಷ್ಟ್ರೀಯ ಸಮುದಾಯದ ಕಿವಿಗೆ ಬೀಳುತ್ತಿಲ್ಲ'' ಎಂದು ಇಮ್ರಾನ್‌ ಆರೋಪಿಸಿದ್ದಾರೆ.

ಕಾಶ್ಮೀರ ವಿಷಯದಲ್ಲಿ ವಿಶ್ವ ಸಮುದಾಯದ ವಿರುದ್ಧ ಬೇಸರಗೊಂಡಿರುವುದಾಗಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ