ಆ್ಯಪ್ನಗರ

ವಿಶ್ವಸಂಸ್ಥೆಯಲ್ಲಿ ಪಾಕ್‌ ಕಿವಿ ಹಿಂಡಿದ ಭಾರತ

ವಿಶ್ವಸಂಸ್ಥೆಯ ವೇದಿಕೆಯಲ್ಲಿ ಭಾರತ ಮೊದಲ ಬಾರಿಗೆ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪ ಮಾಡಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ.

ಏಜೆನ್ಸೀಸ್ 15 Sep 2016, 4:44 am
ಜಿನೀವಾ: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಭಾರತ ಮೊದಲ ಬಾರಿಗೆ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪ ಮಾಡಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ಬಲೂಚಿಸ್ತಾನದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಭಾರತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲೂ ಇದೇ ಪರಿಸ್ಥಿತಿ ಇದೆ ಎಂದು ತಿಳಿಸಿದೆ.
Vijaya Karnataka Web india pakistan
ವಿಶ್ವಸಂಸ್ಥೆಯಲ್ಲಿ ಪಾಕ್‌ ಕಿವಿ ಹಿಂಡಿದ ಭಾರತ


ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 33ನೇ ಅಧಿವೇಶನದಲ್ಲಿ ಮಾತನಾಡಿದ ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಭಾರತದ ರಾಯಭಾರಿ ಮತ್ತು ಶಾಶ್ವತ ಪ್ರತಿನಿಧಿ ಅಜಿತ್‌ ಕುಮಾರ್‌, ಗಡಿ ಆಚೆಗಿನ ಭಯೋತ್ಪಾದನೆಯಿಂದ ಕಾಶ್ಮೀರದಲ್ಲಿ ಗಲಭೆಗೆ, ಹಿಂಸಾಚಾರಕ್ಕೆ ಕಾರಣವಾಗಿದ್ದರೆ ಅದು ಪಾಕಿಸ್ತಾನದಿಂದ ಮಾತ್ರ ಎಂದು ಬೊಟ್ಟು ಮಾಡಿದರು.

ಗಡಿ ಅತಿಕ್ರಮಣಕ್ಕೆ ಅಂಕುಶ ಹಾಕಿ, ಭಯೋತ್ಪಾದಕರ ಮೂಲಸೌಕರ್ಯಗಳನ್ನು ನೆಲಸಮ ಮಾಡಿ, ಭಯೋತ್ಪಾದಕರಿಗೆ ಕೇಂದ್ರ ಸ್ಥಾನವಾಗಿ ಆಶ್ರಯ ನೀಡುವುದನ್ನು ಬಿಟ್ಟುಬಿಡಿ ಎಂದು ಪಾಕಿಸ್ತಾನಕ್ಕೆ ಅನೇಕ ರಾಷ್ಟ್ರಗಳು ಪದೇ ಪದೆ ಹೇಳುತ್ತಲೇ ಬಂದಿವೆ. ಪಾಕಿಸ್ತಾನ ಮಾತ್ರ ಇದಾವುದನ್ನೂ ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ ಎಂದು ಭಾರತ ತನ್ನ ನೆರೆಯ ರಾಷ್ಟ್ರವನ್ನು ತರಾಟೆಗೆ ತೆಗೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ