ಆ್ಯಪ್ನಗರ

ಭಾರತೀಯ ಸಂಜಾತ ಅಭಿಜಿತ್‌ ಬ್ಯಾನರ್ಜಿ ಸೇರಿ ಮೂವರಿಗೆ ಅರ್ಥಶಾಸ್ತ್ರ ನೊಬೆಲ್‌

58 ವರ್ಷದ ಬ್ಯಾನರ್ಜಿ ಕೊಲ್ಕತ್ತಾ ವಿವಿ, ಜವಹರ್‌ಲಾಲ್‌ ನೆಹರೂ ವಿವಿ (ಜೆನ್‌ಯು) ನಲ್ಲಿ ಉನ್ನತ ವ್ಯಾಸಾಂಗ ಮಾಡಿದ್ದು, 1988ರಲ್ಲಿ ಹಾರ್ವರ್ಡ್‌ ವಿವಿಯಿಂದ ಪಿ.ಎಚ್‌.ಡಿ ಪದವಿ ಪಡೆದುಕೊಂಡಿದ್ದಾರೆ.

TIMESOFINDIA.COM 14 Oct 2019, 4:19 pm

ಸ್ಟಾಕ್‌ಹೋಮ್‌: ಭಾರತೀಯ ಮೂಲದ ಅಮೆರಿಕಾದ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ, ಈಸ್ಟರ್‌ ಡುಫ್ಲೋ ಮತ್ತು ಮೈಖಲ್‌ ಕ್ರೆಮರ್‌ ಅವರಿಗೆ 2019ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್‌ ಪ್ರಶಸ್ತಿ ಸಂದಿದೆ. ಜಾಗತಿಕ ಬಡತನವನ್ನು ನಿವಾರಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಇವರುಗಳಿಗೆ ನೊಬೆಲ್‌ ಪ್ರಶಸ್ತಿ ನೀಡಲಾಗಿದೆ.
Vijaya Karnataka Web 2019 economics nobel


ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ನೊಬೆಲ್‌ ಸಮಿತಿ, “ಈ ವರ್ಷದ ಪ್ರಶಸ್ತಿ ವಿಜೇತರು ನಡೆಸಿದ ಸಂಶೋಧನೆಯು ಜಾಗತಿಕ ಬಡತನದ ವಿರುದ್ಧ ಹೋರಾಡುವ ನಮ್ಮ ಸಾಮರ್ಥ್ಯವನ್ನು ಗಣನೀಯವಾಗಿ ಸುಧಾರಿಸಿದೆ. ಕೇವಲ ಎರಡು ದಶಕಗಳಲ್ಲಿ, ಅವರ ಹೊಸ ಪ್ರಯೋಗ ಆಧಾರಿತ ವಿಧಾನವು ಅಭಿವೃದ್ಧಿ ಅರ್ಥಶಾಸ್ತ್ರವನ್ನೇ ಮಾರ್ಪಡಿಸಿದೆ, ಇದು ಈಗ ಅಭಿವೃದ್ಧಿ ಹೊಂದುತ್ತಿರುವ ಸಂಶೋಧನಾ ಕ್ಷೇತ್ರವಾಗಿದೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ವರ್ಣರಂಜಿತ ವ್ಯಕ್ತಿತ್ವದ ಇಥಿಯೋಪಿಯಾ ಅಧ್ಯಕ್ಷರಿಗೆ ನೊಬೆಲ್‌ ಶಾಂತಿ ಪ್ರಶಸ್ತಿಯ ಗರಿ

58 ವರ್ಷದ ಬ್ಯಾನರ್ಜಿ ಕೊಲ್ಕತ್ತಾ ವಿವಿ, ಜವಹರ್‌ಲಾಲ್‌ ನೆಹರೂ ವಿವಿ (ಜೆನ್‌ಯು) ನಲ್ಲಿ ಉನ್ನತ ವ್ಯಾಸಾಂಗ ಮಾಡಿದ್ದು, 1988ರಲ್ಲಿ ಹಾರ್ವರ್ಡ್‌ ವಿವಿಯಿಂದ ಪಿ.ಎಚ್‌.ಡಿ ಪದವಿ ಪಡೆದುಕೊಂಡಿದ್ದಾರೆ.

ಸದ್ಯ ಅವರು ಮಸಾಚುಸೆಟ್ಸ್ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿ (ಎಂಐಟಿ)ಯಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದಾರೆ. 2003ರಲ್ಲಿ ಬ್ಯಾನರ್ಜಿ ಅಬ್ದಲ್‌ ಲತೀಫ್‌ ಜಮೀಲ್‌ ಪಾವರ್ಟಿ ಆಕ್ಷನ್‌ ಲ್ಯಾಬ್‌ನ್ನು ಡುಫ್ಲೋ ಮತ್ತು ಸೆಂಧಿಲ್‌ ಮುಲ್ಲೈನಾಥನ್‌ ಜೊತೆ ಸ್ಥಾಪನೆ ಮಾಡಿರುವ ಇವರು ಇಂದಿಗೂ ಇದರ ನಿರ್ದೇಶಕರಾಗಿದ್ದಾರೆ.

ಕ್ಯಾನ್ಸರ್‌ ಮದ್ದು ಶೋಧಕರಿಗೆ 2019ನೇ ಸಾಲಿನ ನೊಬೆಲ್‌ ಪುರಸ್ಕಾರ

2015ರ ನಂತರದ ಅಭಿವೃದ್ಧಿ ಅಜೆಂಡಾಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳ ಗಣ್ಯ ವ್ಯಕ್ತಿಗಳ ಉನ್ನತ ಮಟ್ಟದ ಸಮಿತಿಯಲ್ಲಿಯೂ ಇವರು ಸೇವೆ ಸಲ್ಲಿಸಿದ್ದಾರೆ.

ಪ್ರಶಸ್ತಿ ಮೊತ್ತ 6.51 ಕೋಟಿ ರೂಪಾಯಿಗಳನ್ನು ಒಳಗೊಂಡಿದ್ದು ಇದನ್ನು ಬ್ಯಾನರ್ಜಿ, ಡುಫ್ಲೋ ಮತ್ತು ಕ್ರಮರ್‌ ಸಮಾನವಾಗಿ ಹಂಚಿಕೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ