ಆ್ಯಪ್ನಗರ

ನೇಪಾಳದಲ್ಲಿ ಭೀಕರ ಅಪಘಾತ: 11 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ನೇಪಾಳದಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಜನರು ಆಸ್ಪತ್ರೆ ಪಾಲಾಗಿದ್ದಾರೆ.

Times Now 12 Oct 2019, 2:50 pm
ಕಠ್ಮಂಡು: ಮೀತಿಮೀರಿ ಜನರನ್ನು ತುಂಬಿಕೊಂಡು ಸಾಗುತ್ತಿದ್ದ ಬಸ್ ಬೆಟ್ಟದಿಂದ ಕೆಳಕ್ಕುರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿ ಸುಮಾರು 108 ಜನರು ಗಾಯಗೊಂಡ ಭೀಕರ ಘಟನೆ ಕೇಂದ್ರ ನೇಪಾಳದಲ್ಲಿ ಶನಿವಾರ ನಡೆದಿದೆ.
Vijaya Karnataka Web bus_accident_GettyImages


ಹಿಂದೂ ಹಬ್ಬ ದಶೈನ್ ಆಚರಿಸಿಕೊಂಡು ಸಿಂಧುಪಾಲ್ ಚೌಕದಿಂದ ನೆರೆಯ ಕಠ್ಮಂಡು ಕಡೆ ಸಾಗುತ್ತಿದ್ದ ಕಿಕ್ಕಿರಿದು ಜನ ತುಂಬಿದ್ದ ಬಸ್ 50 ಅಡಿ ಪ್ರಪಾತಕ್ಕೆ ಉರುಳಿ ಬಿತ್ತು. 6 ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೆ 5 ಜನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು, ಎಂದು ಸರಕಾರಿ ಅಧಿಕಾರಿ ಗೋಮಾ ದೇವಿ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಕಾರಣವೇನೆಂದು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನೇಪಾಳದಲ್ಲಿ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಅಪಘಾತಗಳು ಸಾಮಾನ್ಯವಾಗಿದ್ದು, ಹಬ್ಬದ ಸಮಯದಲ್ಲಿ ರಸ್ತೆಗಳು ಹೆಚ್ಚು ಜನನಿಬಿಡವಾಗಿರುತ್ತವೆ ಮತ್ತು ಸಾರ್ವಜನಿಕ ಸಾರಿಗೆ ದಟ್ಟಣೆಯಿಂದ ಕೂಡಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ