ಆ್ಯಪ್ನಗರ

ಲಂಡನ್‌ನಲ್ಲಿರುವ ಬಸವಣ್ಣ ಪ್ರತಿಮೆಗೆ ಸಿಟಿ ರವಿ ಮಾಲಾರ್ಪಣೆ; ಬಸವಣ್ಣ ತತ್ವ, ವಚನ ಸರ್ವಕಾಲಕ್ಕೂ ಪ್ರಸ್ತುತ

ಬಸವಣ್ಣನವರ ತತ್ವ ಮತ್ತು ವಚನಗಳು ಇಂದಿಗೂ ಮತ್ತು ಎಂದೆಂದಿಗೂ ಪ್ರಸ್ತುತ. ಇಂಗ್ಲೆಂಡ್ ಮತ್ತು ಭಾರತದಲ್ಲಿ ಜಾರಿಯಲ್ಲಿರುವ ಜನತಂತ್ರ ವ್ಯವಸ್ಥೆಯನ್ನು ಬಸವಣ್ಣ ಅವರು ಬಹು ಹಿಂದೆಯೇ ಪ್ರತಿಪಾದಿಸಿದ್ದರು.

Vijaya Karnataka Web 22 Jan 2020, 6:05 pm
ಲಂಡನ್: ಇಂಗ್ಲೆಂಡ್ ರಾಜಧಾನಿ ಲಂಡನ್‍ನ ಸಂಸತ್ ಭವನದ ಮುಂದೆ ಇರುವ ಸಮಾಜ ಸುಧಾರಕ, ಕ್ರಾಂತಿಯೋಗಿ ಬಸವೇಶ್ವರರ ಪ್ರತಿಮೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಇಂದು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
Vijaya Karnataka Web ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ
ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಂಡನ್‍ನಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದ್ದು ನನಗೆ ತುಂಬ ಹೆಮ್ಮೆ ಎನಿಸಿದೆ.

ಈ ಪ್ರತಿಮೆಯನ್ನು ಬ್ರಿಟನ್ ಸಂಸತ್ ಮುಂದೆ ಸ್ಥಾಪಿಸಲು ಪರಿಶ್ರಮ ಪಟ್ಟ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಬಸವಣ್ಣನವರ ತತ್ವ ಮತ್ತು ವಚನಗಳು ಇಂದಿಗೂ ಮತ್ತು ಎಂದೆಂದಿಗೂ ಪ್ರಸ್ತುತ. ಇಂಗ್ಲೆಂಡ್ ಮತ್ತು ಭಾರತದಲ್ಲಿ ಜಾರಿಯಲ್ಲಿರುವ ಜನತಂತ್ರ ವ್ಯವಸ್ಥೆಯನ್ನು ಅವರು ಬಹು ಹಿಂದೆಯೇ ಪ್ರತಿಪಾದಿಸಿದ್ದರು. ಬ್ರಿಟನ್‍ನಲ್ಲಿ ಅವರ ಪ್ರತಿಮೆ ಸ್ಥಾಪನೆಗೊಂಡಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಪ್ರವಾಸೋದ್ಯಮ ಸಚಿವ ಸಿಟಿ ರವಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ