ಆ್ಯಪ್ನಗರ

ಈಸ್ಟರ್‌ ಸಂಡೇ ಬ್ಲಾಸ್ಟ್‌: ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ ಅಧ್ಯಕ್ಷ

ಸ್ಥಳೀಯರ ಜತೆ ಕೈ ಜೋಡಿಸಿರುವ ನ್ಯಾಷನಲ್‌ ತವಾಹಿದ್‌ ಜಮಾತ್‌ ಉಗ್ರ ಸಂಘಟನೆಯ ಕೈವಾಡ ಇರುವ ಗುಮಾನಿ ಇದೆ ಎಂದು ಸಿರಿಸೇನಾ ತಿಳಿಸಿದ್ದಾರೆ.

Vijaya Karnataka Web 22 Apr 2019, 5:07 pm
ಕೊಲಂಬೊ: ಶ್ರೀಲಂಕಾದಲ್ಲಿ ಈಸ್ಟರ್‌ ಭಾನುವಾರ ಸಂಭವಿಸಿದ ಎಂಟು ಸರಣಿ ಬಾಂಬ್‌ ಸ್ಫೋಟದ ಸಂದರ್ಭದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
Vijaya Karnataka Web ಲಂಕಾದಲ್ಲಿ ಬಾಂಬ್‌ ದಾಳಿ
ಲಂಕಾದಲ್ಲಿ ಬಾಂಬ್‌ ದಾಳಿ


ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ರಾಷ್ಟ್ರಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಸ್ಥಳೀಯರ ಜತೆ ಕೈ ಜೋಡಿಸಿರುವ ನ್ಯಾಷನಲ್‌ ತವಾಹಿದ್‌ ಜಮಾತ್‌ ಉಗ್ರ ಸಂಘಟನೆಯ ಕೈವಾಡ ಇರುವ ಗುಮಾನಿ ಇದೆ ಎಂದು ಸಿರಿಸೇನಾ ತಿಳಿಸಿದ್ದಾರೆ.

ಈಗಾಗಲೇ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿರಿಸೇನಾ ತಿಳಿಸಿದ್ದಾರೆ.

ಈಸ್ಟರ್‌ ಸಂಡೇ ಸಂದರ್ಭದಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟದಲ್ಲಿ ಭಾರತೀಯರು, ಕರ್ನಾಟಕದ ಜೆಡಿಎಸ್‌ ಕಾರ್ಯಕರ್ತರು ಮೃತಪಟ್ಟಿರುವುದು ಖಚಿತವಾಗಿದೆ.

ಇದೇ ವೇಳೆ ಭಾನುವಾರದ ಸರಣಿ ಬಾಂಬ್ ಸ್ಫೋಟದ ನಂತರ ತನಿಖೆ ಮುಂದುವರಿಸಿರುವ ಪೊಲೀಸರು ಹಾಗೂ ಸೇನಾ ಯೋಧರು ಎಲ್ಲೆಡೆ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ಬಸ್‌ ನಿಲ್ದಾಣವೊಂದರಲ್ಲಿ 85ಕ್ಕೂ ಹೆಚ್ಚು ಬಾಂಬ್‌ ಡಿಟೋನೇಟರ್‌ಗಳು ಪತ್ತೆಯಾಗಿದೆ ಎಂದು ಲಂಕಾ ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ, ಬಾಂಬ್‌ ನಿಷ್ಕ್ರಿಯಗೊಳಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್‌ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ