ಆ್ಯಪ್ನಗರ

ಕಾಶ್ಮೀರ ವಿಷಯ ಇತ್ಯರ್ಥ ಪಡಿಸದಿದ್ದರೆ ಪರಮಾಣು ಯುದ್ಧ: ಇಮ್ರಾನ್‌ ಖಾನ್‌ ಬೆದರಿಕೆ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ನರೇಂದ್ರ ಮೋದಿ ನೇತೃತ್ವದ ಸರಕಾರ ಆದೇಶ ಹೊರಡಿಸಿದಾಗಿನಿಂದಲೂ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ.

Vijaya Karnataka Web 31 Aug 2019, 2:59 pm
ವಾಷಿಂಗ್ಟನ್‌: ಜಮ್ಮು ಕಾಶ್ಮೀರ ವಿಷಯದಲ್ಲಿ ಜಾಗತಿಕ ಸಮುದಾಯದಿಂದ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ ಈಗ ಯುದ್ಧೋನ್ಮಾದಲ್ಲಿದೆ.
Vijaya Karnataka Web pakistan pm imran khan threatens nuclear war
ಕಾಶ್ಮೀರ ವಿಷಯ ಇತ್ಯರ್ಥ ಪಡಿಸದಿದ್ದರೆ ಪರಮಾಣು ಯುದ್ಧ: ಇಮ್ರಾನ್‌ ಖಾನ್‌ ಬೆದರಿಕೆ


ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಸಮುದಾಯ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ ಪರಮಾಣು ಯುದ್ಧ ಮಾಡಲಾಗುವುದು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್‌ ಬೆದರಿಕೆ ಹಾಕಿದ್ದಾರೆ.

ನ್ಯೂಯಾರ್ಕ್‌ ಟೈಮ್ಸ್‌ನಲ್ಲಿ ಈ ಕುರಿತು ವರದಿ ಪ್ರಕಟಿಸಲಾಗಿದೆ.

ಜಮ್ಮು ಕಾಶ್ಮೀರದ ಮೇಳೆ ಭಾರತ ನಡೆಸುತ್ತಿರುವ ದಬ್ಬಾಳಿಕೆ ಹಾಗೂ ಅಲ್ಲಿನ ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ತಡೆಯಲು ಜಾಗತಿಕ ಸಮುದಾಯ ಮುಂದಾಗದಿದ್ದರೆ ಪರಮಾಣು ಯುದ್ಧ ಹೂಡಲಾಗುವುದು. ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆಯೂ ಇದೆ ಎಂದು ಇಮ್ರಾನ್‌ ಖಾನ್‌ ಬರೆದಿದ್ದಾರೆ.

ಭಾರತದ ರಕ್ಷಣಾ ಸಚಿವರು ಈ ಬಗ್ಗೆ ಈಗಾಗಲೇ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಮೊದಲಿಗೆ ನಾವು ಅಣ್ವಸ್ತ್ರ ಬಳಸುವುದಿಲ್ಲ. ಆದರೆ ಎಲ್ಲವೂ ಪರಿಸ್ಥಿತಿ ಮೇಲೆ ಅವಲಂಬಿತವಾಗಿರುತ್ತದೆ ಎಂದು ಭಾರತದ ರಕ್ಷಣಾ ಸಚಿವರ ಹೇಳಿಕೆಯನ್ನು ಇಮ್ರಾನ್‌ ಖಾನ್‌ ಉಲ್ಲೇಖಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ