ಆ್ಯಪ್ನಗರ

ಕೊರೊನಾದೊಂದಿಗೆ ಬದಕುವುದು ಕಲಿಯಿರಿ: ಪ್ರಜೆಗಳಿಗೆ ಪ್ರಭು ಇಮ್ರಾನ್ ಕಟ್ಟಾಜ್ಞೆ!

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದಲ್ಲಿ ಹೇರಲಾಗಿರುವ ಲಾಕ್‌ಡೌನ್‌ನ್ನು ತೆರವುಗೊಳಿಸುವ ಕುರಿತು ಮಾತನಾಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕೊರೊನಾ ವೈರಸ್ ಜೊತೆಗೆ ಬದುಕುವುದನ್ನು ಪಾಕಿಸ್ತಾನಿಗಳು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

Vijaya Karnataka Web 2 Jun 2020, 10:51 am
ಇಸ್ಲಾಮಾಬಾದ್: ಮಾರಕ ಕೊರೊನಾ ವೈರಸ್‌ನ್ನು ದೇಶದ ನೆಲದಿಂದ ಒದ್ದೊಡಿಸಲು ಭಾರತದ ಪ್ರಧಾನಿ ಪ್ರಧಾನಿ ಮೋದಿ ಹಗಲಿರುಳೂ ದುಡಿಯುತ್ತಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಮ್ಮ ಜಯ ಶತಸಿದ್ಧ ಎಂದು ಜನರಲ್ಲಿ ಭರವಸೆ ಮೂಡಿಸುತ್ತಿದ್ದಾರೆ.
Vijaya Karnataka Web Imran Khan 33
ಸಂಗ್ರಹ ಚಿತ್ರ


ಇದಕ್ಕೆ ವ್ಯತಿರಿಕ್ತವಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಾತ್ರ ಕೊರೊನಾ ವೈರಸ್ ಹೋರಾಟದ ಕುರಿತು ನಕಾರಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಜನರ ಮಾನಸಿಕ ಸ್ಥೈರ್ಯ ಕುಸಿಯಲು ಪರೋಕ್ಷವಾಗಿ ಕಾರಣರಾಗಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದಲ್ಲಿ ಹೇರಲಾಗಿರುವ ಲಾಕ್‌ಡೌನ್‌ನ್ನು ತೆರವುಗೊಳಿಸುವ ಕುರಿತು ಮಾತನಾಡಿರುವ ಇಮ್ರಾನ್ ಖಾನ್, ದೇಶದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಾಕ್‌ಡೌನ್ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಲು ಐಎಸ್‌ಐ ತಂತ್ರದ ಬಳಕೆ: ಇಮ್ರಾನ್ ಖಾನ್!

ಕೊರೊನಾ ವೈರಸ್‌ನೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಪಾಕಿಸ್ತಾನ ಪ್ರಜೆಗಳಿಗೆ ಪುಕ್ಕಟೆ ಸಲಹೆ ನೀಡಿರುವ ಇಮ್ರಾನ್ ಖಾನ್, ಲಾಕ್‌ಡೌನ್ ತೆರವುಗೊಳಿಸಿ ಸರ್ಕಾರದ ಬೊಕ್ಕಸ ತುಂಬಿಸಿ ಎಂದು ಪರೋಕ್ಷ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಇಮ್ರಾನ್ ಖಾನ್, ಲಾಕ್‌ಡೌನ್ ಸಡಿಲಿಸಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವುದು ಇಂದಿನ ತುರ್ತು ಅವಶ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್ ಜೊತೆಗೆ ಬದುಕುವುದನ್ನು ಪಾಕಿಸ್ತಾನಿಗಳು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿರುವ ಇಮ್ರಾನ್ ಖಾನ್, ದೇಶವನ್ನು ಆರ್ಥಿಕ ಹಿಂಜರಿಕೆಯಿಂದ ರಕ್ಷಿಸಲು ಲಾಕ್‌ಡೌನ್ ತೆರವುಗೊಳಿಸುವುದೊಂದೇ ಮಾರ್ಗ ಎಂದು ಹೇಳಿದ್ದಾರೆ.

ಪಾಕ್‌ ಪ್ರಧಾನಿಗೂ ಕೊರೊನಾ ಭೀತಿ..! ಏ.15ಕ್ಕೆ ಇಮ್ರಾನ್‌ ಖಾನ್‌ ಭೇಟಿಯಾಗಿದ್ದ ವ್ಯಕ್ತಿಗೆ ಸೋಂಕು

ಪಾಕಿಸ್ತಾನದಲ್ಲಿ ಒಟ್ಟು 72,160 ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಮಾರಕ ವೈರಾಣುವಿಗೆ ಇದುವರೆಗೂ 1,543 ಜನ ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಪಾಕ್ ಸರ್ಕಾರ ಕೈಗೊಂಡಿರುವ ನಿರ್ಣಯಗಳೂ ಜಾಗತಿಕವಾಗಿ ಗಮನ ಸೆಳೆದಿಲ್ಲ ಎಂಬುದು ದಿಟ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ