ಆ್ಯಪ್ನಗರ

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ದಾಳಿ - ಆತಂಕದ ಸ್ಥಿತಿ

ದೇವ ನಿಂದನೆ ಆರೋಪದಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹಿಂದೂಗಳ ಮೇಲೆ ದಾಳಿ ನಡೆದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯಿಂದ ಜನರು ಭಯಭೀತರಾಗಿದ್ದು ಸ್ಥಳದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Agencies 16 Sep 2019, 5:57 pm
ಇಸ್ಲಾಮಾಬಾದ್ - ದೇವ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ಮುಸ್ಲಿಂ ಧಾರ್ಮಿಕ ಮೂಲಭೂತವಾದಿಗಳ ಗುಂಪು ದಾಳಿ ನಡೆಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
Vijaya Karnataka Web pakistan roits


ಅಲ್ಪಸಂಖ್ಯಾತ ಹಿಂದೂಗಳು ಹೆಚ್ಚಾಗಿ ವಾಸವಾಗಿರುವ ಸಿಂಧ್ ಪ್ರಾಂತ್ಯದ ಘೋಟ್ಕಿ ಟೌನ್ ಶಾಲಾ ಪ್ರಾಂಶುಪಾಲರು ದೇವ ನಿಂದನೆ ಮಾಡಿದ್ದಾರೆ ಎಂಬ ಆರೋಪ ಈ ಘಟನೆಗೆ ಕಾರಣವಾಗಿದೆ.

ಇದರಿಂದ ಆಕ್ರೋಶಗೊಂಡ ಮೂಲಭೂತವಾದಿಗಳ ಉದ್ರಿಕ್ತ ಗುಂಪು ಹಲವೆಡೆ ಹಿಂಸಾಚಾರ ನಡೆಸಿದ್ದು ಶಾಲೆ, ದೇವಾಲಯ ಹಾಗೂ ಹಲವು ಮನೆಗಳಿಗೆ ವ್ಯಾಪಕ ಹಾನಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ 153 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂಜಾಗರೂಕತಾ ಕ್ರಮವಾಗಿ ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ಥ್ ಮಾಡಲಾಗಿದೆ.

ಶಾಲಾ ಪ್ರಾಂಶುಪಾಲರು ದೇವ ನಿಂದನೆ ಮಾಡಿದ್ದಾರೆಂದು ಸಾಮಾಜಿಕ ಜಾಲತಾಣಗಲ್ಲಿ ಕಿಡಿಗೇಡಿಗಳು ಸುದ್ದಿ ಹರಿಯಬಿಟ್ಟಿದ್ದರ ಪರಿಣಾಮ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ ಮುಂದುವರಿದಿದ್ದು, ಗ್ರಾಮದ ಹಿಂದೂ ಸಮುದಾಯದ ಜನರು ಮನೆಯಿಂದ ಹೊರಗಡೆ ಬರಲು ಭಯಪಡುವಂತಹಾ ವಾತಾವರಣವಿದೆ ಎಂದು ಪಾಕಿಸ್ತಾನಿ ಮಾನವ ಹಕ್ಕು ಕಾರ್ಯಕರ್ತ ಸತ್ತಾರ್ ಹೇಳಿಕೊಂಡಿದ್ದಾರೆ.

ಸಾಮಾಜಿಕ ಕಾರ್ಯಕರ್ತರು ಹಾಗೂ ಪ್ರಗತಿಪರ ಹೋರಾಟಗಾರರು ಗ್ರಾಮದಲ್ಲಿ ಶಾಂತಿ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಂತ್ರಸ್ತ ಹಿಂದೂ ಸಮುದಾಯದ ಜನರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.




ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಮುಂದುವರಿದಿದ್ದು ಅಂತರಾಷ್ಟ್ರೀಯ ಸಮುದಾಯ ಈ ಕುರಿತಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು ಘಟನೆಗೆ ಕಾರಣಕರ್ತನಾದ ವ್ಯಕ್ತಿಯ ಬಂಧನಕ್ಕೆ ನೆಟ್ಟಿಗರು ಒತ್ತಾಯಪಡಿಸುತ್ತಿದ್ದಾರೆ. #ArrestMianMithoo ಎಂಬ ಹ್ಯಾಶ್ ಟ್ಯಾಗ್ ಮೂಲಕ ಟ್ವಿಟರಿಗರು ಘಟನೆಯನ್ನು ವಿರೋಧಿಸುತ್ತಿದ್ದಾರೆ.

ಪಾಕಿಸ್ತಾನದಲ್ಲಿ ಹಿಂದೂಗಳು ಅಂತ್ಯಂತ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರಾಗಿದ್ದು ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚಾಗಿ ವಾಸವಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ