ಆ್ಯಪ್ನಗರ

ಬ್ರೇಕಿಂಗ್‌:ಥಾಯ್ಲೆಂಡ್‌ನಲ್ಲಿ ಯೋಧನಿಂದ ಗುಂಡಿನ ದಾಳಿ: 12 ಮಂದಿ ಸಾವು, ಹಲವರಿಗೆ ಗಾಯ

ಥಾಯ್ಲೆಂಡ್‌ನ ಯೋಧ ಮನಬಂದಂತೆ ಗುಂಡು ಹಾರಿಸಿದ್ದು ಹಲವರನ್ನು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಈವರೆಗೆ 12 ಮಂದಿ ಬಲಿಯಾಗಿದ್ದು, ಹಲವರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್‌ನ ಖೋರತ್‌ ನಗರದಲ್ಲಿ ಈ ಘಟನೆ ನಡೆದಿದೆ.

Agencies 8 Feb 2020, 6:48 pm
ಬ್ಯಾಂಕಾಕ್‌: ಈಶಾನ್ಯ ಥಾಯ್ಲೆಂಡ್‌ ನಗರದಲ್ಲಿ ಸ್ಥಳೀಯ ಯೋಧ ಬಂದೂಕಿನಲ್ಲಿ ಮನಬಂದಂತೆ ಗುಂಡು ಹಾರಿಸಿದ್ದು, ಹಲವರನ್ನು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೋರತ್‌ ನಗರದ ಶಾಪಿಂಗ್‌ ಸೆಂಟರ್‌ ಬಳಿ ಹಾಗೂ ಬುದ್ಧನ ದೇಗುಲ ಬಳಿ ಈ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಈವರೆಗೆ 12 ಮಂದಿ ಬಲಿಯಾಗಿದ್ದು, ಹಲವರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Vijaya Karnataka Web shooting nbt


ಥಾಯ್ಲೆಂಡ್‌ನ ಯೋಧ ತನ್ನ ಕಮಾಂಡಿಂಗ್‌ ಅಧಿಕಾರಿ ಸೇರಿ ಕನಿಷ್ಠ 12 ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಜಕ್ರಫಾಂತ್‌ ಥೋಮ್ಮ ಎಂದು ಗುರುತಿಸಲಾಗಿದ್ದು, ಮಷಿನ್‌ ಗನ್‌ನಲ್ಲಿ ಹಲವರಿಗೆ ಗುಂಡು ಹಾರಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾನೆ ಎಂದು ತಿಳಿದುಬಂದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಆರೋಪಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುಂಡು ಹಾರಿಸಿದ ಯೋಧ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ