ಆ್ಯಪ್ನಗರ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರಿಗರ ಪರ ನಿಲ್ಲುವೆ: ಇಮ್ರಾನ್‌ ಖಾನ್‌

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದಾಗಿನಿಂದ ಪಾಕಿಸ್ತಾನ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿದೆ. ಆದರೆ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಕಪಾಳಮೋಕ್ಷವಾಗಿದೆ.

Vijaya Karnataka Web 13 Sep 2019, 10:08 pm
ಮುಜಫರಾಬಾದ್‌: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರಿಗರ ಪರವಾಗಿ ನಿಲ್ಲುವೆ. ಕಾಶ್ಮೀರಗರಿಗೆ ಯಾವುದೇ ರೀತಿಯಲ್ಲೂ ನಿರಾಶೆ ಮಾಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ತಿಳಿಸಿದ್ದಾರೆ.
Vijaya Karnataka Web will stand for kashmir in united nation
ವಿಶ್ವಸಂಸ್ಥೆಯಲ್ಲಿ ಕಾಶ್ಮೀರಿಗರ ಪರ ನಿಲ್ಲುವೆ: ಇಮ್ರಾನ್‌ ಖಾನ್‌


ಪಾಕ್‌ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್‌ನಲ್ಲಿ ಆಯೋಜಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಇಮ್ರಾನ್‌ ಖಾನ್‌ ಭಾಷಣ ಮಾಡಿದರು.

ಸೆಪ್ಟೆಂಬರ್‌ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಭಾಷಣ ಮಾಡಲಿದ್ದು, ಕಾಶ್ಮೀರಿಗರ ಪರವಾಗಿ ಮತನಾಡುವೆ ಎಂದರು.

ಕಾಶ್ಮೀರ ವಿಚಾರವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲಾಗುವುದು. ಯುರೋಪಿಯನ್‌, ಬ್ರಿಟನ್‌ ಸಂಸತ್ತಿನಲ್ಲೂ ಈ ವಿಷಯದ ಬಗ್ಗೆ ಚರ್ಚೆಯಾಗಿದೆ ಎಂದು ಇಮ್ರಾನ್‌ ಖಾನ್‌ ತಿಳಿಸಿದರು.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿತು. ಅಂದಿನಿಂದ ಭಾರತದ ವಿರುದ್ಧ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಇದನ್ನು ಪ್ರಸ್ತಾಪಿಸಿದ್ದು, ಪಾಕಿಸ್ತಾನಕ್ಕೆ ಎಲ್ಲ ಕಡೆಯಿಂದಲೂ ಮುಖಭಂಗವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ