ಯಾದಗಿರಿ:ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಬಸಲಿಂಗಪ್ಪ ಕೌವಲಿ (36) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಊರಿನ ಹೊರ ವಲಯದಲ್ಲಿರುವ ತನ್ನ ಜಮೀನಿನಲ್ಲಿ ವಿಷ ಸೇವಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡ ರೈತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದಾಗ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಬ್ಯಾಂಕ್ ಮತ್ತು ಕೈ ಸಾಲ ಸೇರಿ 7 ಲಕ್ಷ ರೂ. ಸಾಲವಿದೆ ಎಂದು ತಿಳಿದು ಬಂದಿದೆ. 3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದನು. ಈ ಘಟನೆ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.