ಕೊಡೇಕಲ್: ರಾಜನಕೋಳೂರಿನಿಂದ ಹುಣಸಗಿಗೆ ಹೋಗುವ ರಾಜ್ಯ ಹೆದ್ದಾರಿಯ ಸೋಮನಾಥ ಗುಡಿಯ ಇಳಿಜಾರು ರಸ್ತೆಯಲ್ಲಿ ಮಂಗಳವಾರ ರಾತ್ರಿ ಎರಡು ಮೋಟಾರ್ ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಬಲಶೆಟ್ಟಿಹಾಳ ಗ್ರಾಮದ ಲಕ್ಷ ್ಮಮ್ಮ ಲಕ್ಷ ್ಮಣ (59) ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದರು. ಪೆಟ್ಟಾಗಿ ಕೊನೆಯುಸಿರೆಳೆದಿದ್ದಾರೆ.
ಬಲಶೆಟ್ಟಿಹಾಳ ಗ್ರಾಮದಿಂದ ರಾಜನಕೋಳೂರು ಗ್ರಾಮಕ್ಕೆ ಬೈಕ್ನಲ್ಲಿ ಸವಾರ ಮತ್ತು ಇಬ್ಬರೂ ಮಹಿಳೆಯರು ತೆರಳುತಿದ್ದರು. ಅದೇ ರಸ್ತೆಯಲ್ಲಿ ರಾಜನಕೋಳೂರದಿಂದ ದ್ಯಾಮನಾಳ ಗ್ರಾಮಕ್ಕೆ ಹೋಗುತ್ತಿದ್ದ ಮತ್ತೊಂದು ಬೈಕ್ ಸೋಮನಾಥ ದೇವಸ್ಥಾನದ ಇಳಿಜಾರಿನಲ್ಲಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು ಅವರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಜನಕೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ,ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.