ಆ್ಯಪ್ನಗರ

ಬಡ್ಡಿಸಹಿತ ಬಾಕಿ ಹಣ ಪಾವತಿಸುವಂತೆ ಸರಕಾರಕ್ಕೆ ಪ್ರಸ್ತಾವನೆ

ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ರೈತರ ಬೆಳೆಗಳಿಗೆ ಶೀಘ್ರ ಹಣ ಪಾವತಿಯಾಗಬೇಕು. ಒಂದು ತಿಂಗಳಲ್ಲಿ ಹಣ ಪಾವತಿಯಾಗದಿದ್ದಲ್ಲಿ ಬಡ್ಡಿಸಹಿತ ಹಣ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ ಹೇಳಿದರು.

Vijaya Karnataka 12 Dec 2018, 11:35 pm
ಯಾದಗಿರಿ : ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ರೈತರ ಬೆಳೆಗಳಿಗೆ ಶೀಘ್ರ ಹಣ ಪಾವತಿಯಾಗಬೇಕು. ಒಂದು ತಿಂಗಳಲ್ಲಿ ಹಣ ಪಾವತಿಯಾಗದಿದ್ದಲ್ಲಿ ಬಡ್ಡಿಸಹಿತ ಹಣ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ ಹೇಳಿದರು.
Vijaya Karnataka Web advance to government to pay interest free balance
ಬಡ್ಡಿಸಹಿತ ಬಾಕಿ ಹಣ ಪಾವತಿಸುವಂತೆ ಸರಕಾರಕ್ಕೆ ಪ್ರಸ್ತಾವನೆ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಮುಖ ಬೆಳೆಗಳ ಉತ್ಪಾದನೆ, ಮಾರುಕಟ್ಟೆ ಮತ್ತು ಸುಧಾರಣೆ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳು, ತಜ್ಞರು ಮತ್ತು ರೈತ ಪ್ರತಿನಿಧಿಗಳೊಡನೆ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಬಲ ಬೆಲೆಯಡಿ ಖರೀದಿಸಿದ ಬೆಳೆಗಳಿಗೆ 3 ದಿನಗಳಲ್ಲಿ ರೈತರಿಗೆ ಹಣ ಪಾವತಿಸಬೇಕೆಂದು ಕೇಂದ್ರ ಸರಕಾರದ ಸೂಚನೆ ಇದೆ. ಎಂತಹ ಸಮಸ್ಯೆ ಇದ್ದರೂ ರೈತರಿಗೆ ಒಂದು ತಿಂಗಳಲ್ಲಿ ಹಣ ಪಾವತಿಯಾಗಬೇಕು. ಕಳೆದ ಸಾಲಿನಲ್ಲಿ ತೊಗರಿ ಮಾರಾಟ ಮಾಡಿದ ರೈತರಿಗೆ ಒಂದು ವಾರದಲ್ಲಿ ಹಣ ಪಾವತಿಸಬೇಕು. ಹಣ ಪಾವತಿಸಿದ ಬಗ್ಗೆ ವರದಿ ನೀಡಬೇಕು ಎಂದು ಅವರು ಸೂಚಿಸಿದರು.

ರೈತರ ದಾಖಲೆಗಳು ಆನ್‌ಲೈನ್‌ನಲ್ಲಿ ನೋಂದಣಿ ಆಗುವ ರೀತಿಯಲ್ಲಿ ತಾಂತ್ರಿಕ ಬದಲಾವಣೆ ತಂದರೆ ರೈತರಿಗೆ ಶೀಘ್ರ ಹಣ ಪಾವತಿ ಆಗುತ್ತದೆ ಎಂಬುದಾಗಿ ಶಹಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶಿವಕುಮಾರ ಅವರು ಸಭೆಯ ಗಮನಕ್ಕೆ ತಂದರು. ಆಗ ಆಯೋಗದ ಅಧ್ಯಕ್ಷರು, ಈ ಬಗ್ಗೆ ವಿವರವಾದ ಮಾಹಿತಿಯನ್ನು ಪತ್ರದ ಮೂಲಕ ಸಲ್ಲಿಸಿ. ಈ ಅಂಶವನ್ನು ಸರಕಾರದ ಮುಂದಿಡುತ್ತೇನೆ ಎಂದು ತಿಳಿಸಿದರು.

ಸರಕಾರಗಳು ರೈತರನ್ನು ಕಡೆಗಣಿಸುವುದಿಲ್ಲ. ಆದ್ದರಿಂದ ಡಿಸೆಂಬರ್‌ ತಿಂಗಳೊಳಗೆ ತೊಗರಿ ಖರೀದಿ ಪ್ರಕ್ರಿಯೆ ಆರಂಭವಾಗಬಹುದು. ಖರೀದಿ ಆರಂಭಿಸಿದಾಗ ಜಿಲ್ಲೆಯಲ್ಲಿ ವಾಸ್ತವ್ಯ ಮಾಡಿ, ಪರಿಶೀಲನೆ ನಡೆಸುವುದಾಗಿ ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ ಅವರು ಹೇಳಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅವರು ಮಾತನಾಡಿ, ಪ್ರಸಕ್ತ ವರ್ಷ ಸಕಾಲದಲ್ಲಿ ಮಳೆ ಬಾರದ ಕಾರಣ ತೊಗರಿ ಇಳುವರಿ ಪ್ರಮಾಣ ಪ್ರತಿ ಹೆಕ್ಟೇರ್‌ಗೆ 10ರಿಂದ 12 ಕ್ವಿಂಟಲ್‌ನಂತೆ ಜಿಲ್ಲೆಯಲ್ಲಿ ಸುಮಾರು 7 ಲಕ್ಷ ಕ್ವಿಂಟಾಲ್‌ ಇಳುವರಿ ಬರಬಹುದು ಎಂದು ಅಂದಾಜಿಸಲಾಗಿದೆ. ಈ ವರ್ಷ 35 ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಕಲಾವಿದ ಲಕ್ಷಣ ಛತ್ರಿ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಅಧಿಕಾರಿಗಳಾದ ದೇವಿಕಾ ಆರ್‌, ವಿಶ್ವನಾಥ ಮಲಕೂಡ, ಮಲ್ಲಿಕಾರ್ಜುನ ಬಾಬು, ಭೀಮರಾಯ, ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ, ದೇವಿಂದ್ರಪ್ಪ ಮಾಲಗತ್ತಿ, ನಾಗರತ್ನಾ ಪಾಟೀಲ್‌, ಮಹಾದೇವಿ ಬೇವಿನಾಳಮಠ, ಅಯ್ಯಣ್ಣ ಹಾಲಬಾವಿ, ಕಾಂತು ಪಾಟೀಲ್‌, ದುರ್ಗಣ್ಣ, ಚೆನ್ನಾರೆಡ್ಡಿ ಪಾಟೀಲ್‌ ಸೇರಿದಂತೆ ರೈತರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿಗೆ ಸೂಚನೆ : ರೈತರಿಗೆ 90 ದಿನಗಳವರೆಗೆ ಬಡ್ಡಿರಹಿತ ಅಡಮಾನ ಸಾಲಸೌಲಭ್ಯವನ್ನು ನೀಡಲಾಗುತ್ತಿದೆ. ಈ ಅಡಮಾನ ಸಾಲದ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್‌ 14ರಂದು ಶಹಾಪುರ ಎಪಿಎಂಸಿ ಯಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ ಸೂಚಿಸಿದರು.

ಜಿಲ್ಲೆಯಲ್ಲಿ ಭತ್ತವನ್ನು ಎಪಿಎಂಸಿ ಗಳಲ್ಲಿ ಮಾರಾಟ ಮಾಡಲು ರೈತರಿಗಿರುವ ತೊಂದರೆಗಳೇನು? ಮತ್ತು ಇದಕ್ಕೆ ಪರಿಹಾರ ಏನು? ಎಂಬುದರ ಬಗ್ಗೆ ಸಮಗ್ರವಾದ ವೈಜ್ಞಾನಿಕ ವರದಿಯನ್ನು ಫೆಬ್ರುವರಿ ಅಂತ್ಯದೊಳಗೆ ನೀಡುವಂತೆ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಿ.ಬಿ.ಲೋಕೇಶ್‌ ಅವರಿಗೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ