ಆ್ಯಪ್ನಗರ

ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ: ರಾಜಶೇಖರ ಪಾಟೀಲ್‌

ಸದ್ಯಕ್ಕೆ ಕುಮಾರಸ್ವಾಮಿ ಸಿಎಂ ಇದ್ದಾರೆ. ಆದರೆ ನಮಗೆ ಸಿದ್ದರಾಮಯ್ಯ ಅವರೇ ನಾಯಕ ಎಂದು ಯಾದಗಿರಿ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್‌ ಹೇಳಿದ್ದಾರೆ.

Vijaya Karnataka 27 Feb 2019, 11:50 am
ಯಾದಗಿರಿ: ಲೋಕಸಭೆ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‌ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್‌ ಸಹ ಸಮರ್ಥಿಸಿದ್ದಾರೆ.
Vijaya Karnataka Web Siddaramaiah


ಕೆರೆ ಹೂಳೆತ್ತುವ ಕಾಮಾಗಾರಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ನಾರಾಯಣರಾವ್‌ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಸದ್ಯಕ್ಕೆ ಕುಮಾರಸ್ವಾಮಿ ಸಿಎಂ ಇದ್ದಾರೆ. ಆದರೆ ನಮಗೆ ಸಿದ್ದರಾಮಯ್ಯ ಅವರೇ ನಾಯಕ ಎನ್ನುವ ಮೂಲಕ ಸಿದ್ದು ಪರ ಬ್ಯಾಟಿಂಗ್‌ ಮಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸಿಎಲ್‌ಪಿ ಲೀಡರ್‌. ಹೀಗಾಗಿ ಅವರೇ ನಮ್ಮ ನಾಯಕರು. ನಮ್ಮವರನ್ನು ನಾವು ನಾಯಕರು ಅಂತಾ ಹೇಳದಿದ್ದರೆ ಬೇರೆಯವರನ್ನು ಹೇಳಿಕೊಳ್ಳುವುದಕ್ಕೆ ಆಗುತ್ತೆಯೇ ಎಂದು ಪ್ರಶ್ನೆ ಮಾಡಿದರು.

ಸಮ್ಮಿಶ್ರ ಸರಕಾರ ಯಾವುದೇ ಅಡೆತಡೆಗಳು ಇಲ್ಲದೆ ನಡೆಯುತ್ತಿದೆ. ಏನಾದರೂ ಸಣ್ಣಪುಟ್ಟ ಸಮಸ್ಯೆ ಇದ್ದರೆ ಅದನ್ನು ನಮ್ಮ ಪಕ್ಷದ ನಾಯಕರು ನಿಭಾಯಿಸುತ್ತಾರೆ. ಸರಕಾರ ಗಟ್ಟಿಯಾಗಿದ್ದು ಅಲುಗಾಡುವುದಿಲ್ಲವೆಂದು ತಿಳಿಸಿದರು.

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ

ಬೀದರ್‌ ಲೋಕಸಭೆ ಕ್ಷೇತ್ರದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಪತ್ನಿ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಹೈಕಮಾಂಡ್‌ ಯಾರಿಗೆ ಟಿಕೆಟ್‌ ಕೊಟ್ಟರೂ ಸಹ ನಾವು ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ ಎಂದು ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್‌ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ