ಆ್ಯಪ್ನಗರ

ಬಯೋಮೆಟ್ರಿಕ್‌ ವ್ಯವಸ್ಥೆ ಸುಧಾರಣೆಗೆ ಆಗ್ರಹ

ಪಡಿತರ ಧಾನ್ಯ ವಿತರಣಾ ಪದ್ಧತಿಯಲ್ಲಿ ಸರಕಾರ ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಿದ್ದು, ಕೆಲವೆಡೆ ವಿದ್ಯುತ್‌ ಸಂಪರ್ಕವಿಲ್ಲದೆ ಕೆಲವೆಡೆ ಬಿಪಿಎಲ್‌ ಕಾರ್ಡುದಾರರು ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ವಿಧಾನಸಭೆಯಲ್ಲಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Vijaya Karnataka 16 Dec 2018, 5:00 am
ಯಾದಗಿರಿ :ಪಡಿತರ ಧಾನ್ಯ ವಿತರಣಾ ಪದ್ಧತಿಯಲ್ಲಿ ಸರಕಾರ ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಿದ್ದು, ಕೆಲವೆಡೆ ವಿದ್ಯುತ್‌ ಸಂಪರ್ಕವಿಲ್ಲದೆ ಕೆಲವೆಡೆ ಬಿಪಿಎಲ್‌ ಕಾರ್ಡುದಾರರು ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ವಿಧಾನಸಭೆಯಲ್ಲಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
Vijaya Karnataka Web biometric system requirement improvement
ಬಯೋಮೆಟ್ರಿಕ್‌ ವ್ಯವಸ್ಥೆ ಸುಧಾರಣೆಗೆ ಆಗ್ರಹ


ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ತಮ್ಮ ಲಿಖಿತ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮ್ಮೀರ್‌ ಅಹ್ಮದ್‌ ಅವರು ನೀಡಿದ ಉತ್ತರಕ್ಕೆ ಪ್ರತಿಕ್ರಿಯಿಸಿದ ಶಾಸಕ ಕಂದಕೂರ, ಗುರುಮಠಕಲ್‌ ಮತಕ್ಷೇತ್ರದಲ್ಲಿನ ಜನತೆ ಉದ್ಯೋಗ ಅರಸಿ ಗುಳೆ ಹೋಗುತ್ತಿರುವ ಸಮಸ್ಯೆ ಹೆಚ್ಚಾಗಿದ್ದು, ಹಳ್ಳಿಗಾಡಿನ ಮನೆಗಳಲ್ಲಿ ಹೆಚ್ಚಾಗಿ ವಯಸ್ಸಾದ ತಂದೆ-ತಾಯಿಗಳು ಇರುತ್ತಾರೆ. ಆದರೆ ಬಯೋಮೆಟ್ರಿಕ್‌ ಯಂತ್ರದಲ್ಲಿ ಅವರ ಬೆರಳಿನ ಗೆರೆಗಳು ಸರಿಯಾಗಿ ಮೂಡದ ಕಾರಣ ಪಡಿತರ ಆಹಾರಧಾನ್ಯಗಳು ವಿತರಣೆ ಮಾಡುವಲ್ಲಿ ನ್ಯಾಯಬೆಲೆ ಅಂಗಡಿಯವರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯ ವಿತರಣೆ ಪಾರದರ್ಶಕವಾಗಿ ನಡೆಯಬೇಕು ಎಂಬ ದೃಷ್ಠಿಯಿಂದ ಸರ್ಕಾರ ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಲಾಗಿದೆ. ಅಲ್ಲದೆ ವಿದ್ಯುತ್‌ ತೊಂದರೆ ಕಂಡು ಬಂದರೆ ತಕ್ಷಣವೇ ಮೊಬೈಲ್‌ ಮೂಲಕವೂ ಬೆರಳಚ್ಚು ತೆಗೆದುಕೊಳ್ಳುವ ವ್ಯವಸ್ಥೆ ಇದೆ ಎಂದು ಸಚಿವ ಜಮ್ಮಿರ್‌ ಅಹ್ಮದ್‌ ತಿಳಿಸಿದ್ದಾರೆ.

ಸಿಎಂರಿಂದ ಸಕಾರಾತ್ಮಕ ಸ್ಪಂದನೆ


ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿvಮಂಡಳಿಗೆ ಸರಕಾರ 1 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇನ್ನೂ 500 ಕೋಟಿ ರೂ.ಬಿಡುಗಡೆಗೊಳಿಸಬೇಕು ಎಂಬ ಹೈ-ಕ ಭಾಗದ ಶಾಸಕರ ಬೇಡಿಕೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಹೈ.ಕ.ಭಾಗದ ಶಾಸಕರ ಸಭೆಯಲ್ಲಿ ಹಿಂದುಳಿದ ನಮ್ಮ ಭಾಗದ ಅಭಿವೃದ್ಧಿಗೊಳಿಸಲು ಮಂಡಳಿಗೆ ಹೆಚ್ಚುವರಿಯಾಗಿ 500 ಕೋಟಿ ರೂ.ಗಳ ಬಿಡುಗಡೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ ಮಂಡಳಿಯಲ್ಲಿ ಇಂಥ ಕಾಮಗಾರಿಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು ಎಂಬ ಕೆಲ ನಿಯಮಗಳನ್ನು ಸರಳೀಕರಣ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.

ಪ್ರಾದೇಶಿಕ ಆಯುಕ್ತರೇ ಎಚ್‌ಕೆಆರ್‌ಡಿಬಿಗೆ ಕಾರ್ಯದರ್ಶಿಗಳಾಗಿರುವುದರಿಂದ ಮಂಡಳಿಯ ಕೆಲಸ ಕಾರ್ಯಗಳಲ್ಲಿ ನಿಧಾನವಾಗುತ್ತಿದೆ. ಹೀಗಾಗಿ ಮಂಡಳಿಗೆ ಅಧೀಕ್ಷಿಯ ಅಭಿಯಂತರರೊಬ್ಬರು ನೇಮಕ ಮಾಡಬೇಕು ಜತೆಗೆ ಪ್ರತಿ ತಾಲೂಕಿಗೆ ಎಇಇಗಳನ್ನು ನೇಮಕ ಮಾಡಿದರೆ ಎಚ್‌ಕೆಆರ್‌ಡಿಬಿಯ ಅನುದಾನ ಕಾಲಮಿತಿಯೊಳಗೆ ಖರ್ಚಾಗುವದಲ್ಲದೆ, ಗ್ರಾಮೀಣ ಭಾಗದ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ