ಆ್ಯಪ್ನಗರ

ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ

ನಗರದ ಬೆಟ್ಟದ ಹತ್ತಿರುವಿರುವ ಭಾಗ್ಯವಂತಿ ದೇವಸ್ಥಾನದಲ್ಲಿ ಬಾಲ್ಯ ವಿವಾಹ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Vijaya Karnataka 11 Jul 2019, 5:00 am
ಶಹಾಪುರ :ನಗರದ ಬೆಟ್ಟದ ಹತ್ತಿರುವಿರುವ ಭಾಗ್ಯವಂತಿ ದೇವಸ್ಥಾನದಲ್ಲಿ ಬಾಲ್ಯ ವಿವಾಹ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
Vijaya Karnataka Web child marriage prevention by officers
ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ


ತಾಲೂಕಿನ ಕನ್ಯೆಕೊಳೂರು ಗ್ರಾಮದ 17 ವರ್ಷದ ಬಾಲಕಿಯನ್ನು ಸಗರ ಗ್ರಾಮದ ಯುವಕನಿಗೆ ಕೊಟ್ಟು ಮದುವೆ ಮಾಡಲು ತಯಾರಿಸಲಾಗಿತ್ತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಟಿ.ಪಿ.ದೊಡ್ಮನಿ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕದ ಅಧಿಕಾರಿಗಳು ಸಮಾಜ ಕಾರ್ಯಕರ್ತ ದಶರಥ ನಾಯಕ, ಕಾನೂನು ಅಧಿಕಾರಿ ರಾಜೇಂದ್ರ ಕುಮಾರ ಯಾದವ್‌, ಪೊಲೀಸ್‌ ಅಧಿಕಾರಿ ಸಂಗನಗೌಡ ಪಾಟೀಲ್‌, ಅಂಗನವಾಡಿ ಮಹಿಳಾ ಮೇಲ್ವಿಚಾರಕಿ ಸಾವಿತ್ರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಪಾಲಕರಿಗೆ ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ತಿಳಿಹೇಳಿ ಮದುವೆ ಮಾಡಿಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ