ಆ್ಯಪ್ನಗರ

ಬೆಂಗಳೂರು ಚಲೋ ಡಿ.30ರಂದು

ಆರ್‌ಟಿಇಯನ್ನು ಖಾಸಗಿ ಶಾಲೆಗಳಲ್ಲಿಎಂದಿನಂತೆ ಮರು ಚಾಲನೆ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ನಾನಾ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಡಿ. 30ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಕಡ್ಡಾಯವಾಗಿ ಭಾಗವಹಿಸಬೇಕೆಂದು ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ್‌ ರಾಠೋಡ ತಿಳಿಸಿದ್ದಾರೆ.

Vijaya Karnataka 28 Dec 2019, 5:00 am
ಯಾದಗಿರಿ:ಆರ್‌ಟಿಇಯನ್ನು ಖಾಸಗಿ ಶಾಲೆಗಳಲ್ಲಿಎಂದಿನಂತೆ ಮರು ಚಾಲನೆ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ನಾನಾ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಡಿ. 30ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಕಡ್ಡಾಯವಾಗಿ ಭಾಗವಹಿಸಬೇಕೆಂದು ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ್‌ ರಾಠೋಡ ತಿಳಿಸಿದ್ದಾರೆ.
Vijaya Karnataka Web demand for appointment of rte in private schools
ಬೆಂಗಳೂರು ಚಲೋ ಡಿ.30ರಂದು


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಜಿಲ್ಲಾಮಟ್ಟದಲ್ಲಿ ಹೋರಾಟ ನಡೆಸಲಾಗಿದ್ದು ಈಗ ಸರಕಾರದ ಗಮನ ಸೆಳೆಯಲು 30ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿಪ್ರತಿಭಟನೆ ನಡೆಸಲಾಗುವುದು. ಅಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದೆ.

ಯಾದಗಿರಿಯಿಂದ ಡಿ. 29 ರಂದು ರಾತ್ರಿ ರೈಲು ಮುಖಾಂತರ ಬೆಂಗಳೂರು ಚಲೋ ಆಯೋಜಿಸಿದ್ದು, ಜಿಲ್ಲೆಯ ಎಲ್ಲಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಎಂಎಲ್‌ಎ, ಎಂಪಿ, ಎಂಎಲ್‌ಸಿ ಹಾಗೂ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದಿಂದ ಶೈಕ್ಷಣಿಕ ಸಂಸ್ಥೆಗಳಿಗೆ ಅನುದಾನ ಕೊಡಲು ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು, ಗ್ರಾಮೀಣ ಭಾಗದಲ್ಲಿನ ಶೈಕ್ಷಣಿಕ ಸಂಸ್ಥೆಗಳಿಗೆ ಶೌಚಾಲಯಗಳನ್ನು ಕಟ್ಟಿಸಿಕೊಡಬೇಕು. ಇದು ಗ್ರಾಮದ ಶುಚಿತ್ವವನ್ನು ಕಾಪಾಡಲು ಸಹಕಾರಿಯಾಗಿರುತ್ತದೆ ಎಂದರು.

ಪಠ್ಯ ಪುಸ್ತಕಗಳನ್ನು ಖಾಸಗಿ ಶಾಲೆಗಳಿಗೂ ಉಚಿತವಾಗಿ ನೀಡಿ, ಇಲ್ಲವಾದರೆ ಮಾರುಕಟ್ಟೆಯಲ್ಲಿಲಭ್ಯವಾಗುವಂತೆ ಮಾಡಿ ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳಿಂದ ಪಠ್ಯಪುಸ್ತಕಗಳ ಮುಂಗಡ ಹಣವನ್ನು ಕಟ್ಟಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಇಲಾಖೆಯಿಂದ ವಿದ್ಯಾಶ್ರೀ ಯೋಜನೆಯನ್ನು (ಶಿಷ್ಯ ವೇತನವನ್ನು) ಮುಂದುವರಿಸಬೇಕು. ಶಿಕ್ಷಕರಿಗೆ ಸೇವಾ ಭದ್ರತೆಯಲ್ಲಿಎಷ್ಟು ವೇತನ ನೀಡುವುದು ಎಂಬುದನ್ನು ಆಯಾ ಶಿಕ್ಷಣ ಸಂಸ್ಥೆಗಳ ವಿವೇಚನೆಗೆ ಬಿಡಬೇಕು. ಕಡ್ಡಾಯ ಮೂಲ ವೇತನ ನೀಡಬೇಕು ಎಂಬ ನಿಯಮ ಬದಲಾಯಿಸಬೇಕು. ಖಾಸಗಿ ಶಾಲೆಗಳ ಶುಲ್ಕದ ವಿವರವನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿಹಾಕುವುದು ಅವೈಜ್ಞಾನಿಕ ಪದ್ಧತಿಯಾಗಿದ್ದರಿಂದ ಅದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನವೀಕರಣ ರದ್ದುಗೊಳಿಸಿ

ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು ರದ್ದುಪಡಿಸಬೇಕು, 1995ರ ನಂತರ ಪ್ರಾರಂಭವಾದ ಶಾಲೆಗಳನ್ನು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಅನುದಾನಕ್ಕೆ ಒಳಪಡಿಸಬೇಕು. ಖಾಸಗಿ ಶಾಲೆಗಳಿಗೆ ಕೆಕೆಆರ್‌ಡಿಬಿ ಯಿಂದ ಅನುದಾನ ನೀಡಬೇಕು, ಖಾಸಗಿ ಶಿಕ್ಷಕರಿಗೆ ಕನಿಷ್ಠ ವೇತನ ಕೊಡಬೇಕು. ಭೂ ಪರಿವರ್ತನೆಯ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ