ಆ್ಯಪ್ನಗರ

ಡಿವೈಎಸ್ಪಿ ಆತ್ಮಹತ್ಯೆ ಸಿಬಿಐ ತನಿಖೆಯಾಗಲಿ: ಬಿಎಸ್‌ವೈ

ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

ವಿಕ ಸುದ್ದಿಲೋಕ 11 Jul 2016, 11:26 am
ಯಾದಗಿರಿ: ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ.
Vijaya Karnataka Web dysp suicide cbi probe demand
ಡಿವೈಎಸ್ಪಿ ಆತ್ಮಹತ್ಯೆ ಸಿಬಿಐ ತನಿಖೆಯಾಗಲಿ: ಬಿಎಸ್‌ವೈ


ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಸಚಿವ ಜಾರ್ಜ್ ಅವರ ವಿರುದ್ಧ ಕೇಸ್ ದಾಖಲಿಸಬೇಕು. ಸಚಿವ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ನಿರಂತರ ವರ್ಗಾವಣೆಯಿಂದ ಕಿರುಕುಳವಾಗಿದೆ. ಮಾಜಿ ಡಿಎಸ್ಪಿ ಅನುಪಮಾ ಶೆಣೈ ಅವರನ್ನು ಸಿಎಂ ಮನವಲಿಸಿ ಮತ್ತೆ ಸೇವೆಗೆ ಕರೆತರಬೇಕು. ಮೃತ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ್‌ ಬಂಡೆ ಕುಟುಂಬಕ್ಕೆ ಇಲ್ಲಿಯವರೆಗೂ ನ್ಯಾಯ ಸಿಕ್ಕಿಲ್ಲ, ನ್ಯಾಯ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು, ಆಡಳಿತ ಯಂತ್ರ ಕುಸಿದಿದೆ ಎಂದು ಆರೋಪಿಸಿದ ಬಿಎಸ್‌ವೈ ಗಣಪತಿ ಪ್ರಕರಣ ಸಿಬಿಐಗೆ ವಹಿಸಲು ಮತ್ತು ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದರು. ಈ ನಡುವೆ ಮಡಿಕೇರಿಯಲ್ಲಿ ಬಿಜೆಪಿ ಸೋಮವಾರ ಪ್ರತಿಭಟನೆ ಆರಂಭಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ