ಆ್ಯಪ್ನಗರ

ಮೀನಿನ ಬಲೆಗೆ ಸಿಲುಕಿ ಮುಖ್ಯ ಶಿಕ್ಷಕ ಸಾವು

ತಾಲೂಕಿನ ಗುರುಸುಣಿಗಿ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಮುಖ್ಯಶಿಕ್ಷರೊಬ್ಬರು ನೀರು ಪಾಲಾದ ಘಟನೆ ನಡೆದಿದೆ.

Vijaya Karnataka 28 Sep 2018, 7:48 am
ವಡಗೇರಾ: ತಾಲೂಕಿನ ಗುರುಸುಣಿಗಿ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಮುಖ್ಯಶಿಕ್ಷರೊಬ್ಬರು ನೀರು ಪಾಲಾದ ಘಟನೆ ನಡೆದಿದೆ.
Vijaya Karnataka Web Death 2


ಚಿಕ್ಕಮಗಳೂರು ಮೂಲದ ಆರ್‌.ಕೆ.ಭುವನೇಶ್‌ (40) ಮೃತರು. ವಡಗೇರಾ ತಾಲೂಕಿನ ಹುಂಡೇಕಲ್‌ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಜಾಡುವ ಸಮಯದಲ್ಲಿ ಮೀನಿಗಾಗಿ ಹಾಕಿದ ಬಲೆಗೆ ಸಿಲುಕಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇವರು ಚಿಕ್ಕಮಗಳೂರು ಮೂಲದವರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವಡಗೇರಾ ಪಿಎಸ್‌ಐ ಮಹಾದೇವಪ್ಪ ದಿಡ್ಡಿಮನಿ ತಿಳಿಸಿದ್ದಾರೆ. ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ