ಆ್ಯಪ್ನಗರ

ಪಟಾಕಿ ಮಾರಾಟ ಮಾಡಲು ಪರವಾನಗಿ ಕಡ್ಡಾಯ

ಜಿಲ್ಲಾದ್ಯಂತ ಅ.27ರಿಂದ 29ರವರೆಗೆ ದೀಪಾವಳಿ ಹಬ್ಬ ಆಚರಿಸಲಿದ್ದು, ಪರವಾನಗಿ ಇಲ್ಲದೆ ಪಟಾಕಿ ಹಾಗೂ ಇತರ ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.

Vijaya Karnataka 23 Oct 2019, 10:07 pm
ಯಾದಗಿರಿ:ಜಿಲ್ಲಾದ್ಯಂತ ಅ.27ರಿಂದ 29ರವರೆಗೆ ದೀಪಾವಳಿ ಹಬ್ಬ ಆಚರಿಸಲಿದ್ದು, ಪರವಾನಗಿ ಇಲ್ಲದೆ ಪಟಾಕಿ ಹಾಗೂ ಇತರ ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.
Vijaya Karnataka Web license to sell fireworks is compulsory
ಪಟಾಕಿ ಮಾರಾಟ ಮಾಡಲು ಪರವಾನಗಿ ಕಡ್ಡಾಯ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿಮಾತನಾಡಿದರು. ದೀಪಾವಳಿ ಹಬ್ಬದ ಸಂದರ್ಭದಲ್ಲಿಸಾರ್ವಜನಿಕರು ಮತ್ತು ಮಾರಾಟಗಾರರು ಪಟಾಕಿ ಹಾಗೂ ಇತರ ಸ್ಫೋಟಕ ವಸ್ತುಗಳ ಬಳಕೆಯಲ್ಲಿಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಪಟಾಕಿ ಮಾರಾಟಗಾರರು ಹಾಗೂ ಸಾರ್ವಜನಿಕರು ಸುಪ್ರೀಂಕೋರ್ಟ್‌ ನಿಗದಿಪಡಿಸಿರುವ ಪರಿಸರ ಸ್ನೇಹಿ ಪಟಾಕಿಗಳನ್ನು ಉಪಯೋಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದರು.

ಸುಪ್ರೀಂಕೋರ್ಟ್‌ ಆದೇಶದಂತೆ ಸಾರ್ವಜನಿಕರು ಪಟಾಕಿಗಳನ್ನು ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಸ್ಫೋಟಿಸಬಹುದು. ಸ್ಫೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡಬೇಕು ಮತ್ತು ಅಧಿಕೃತವಾಗಿ ಪರವಾನಗಿ ಪಡೆದವರ ಸ್ಫೋಟಕ ಪಟಾಕಿಗಳನ್ನು ಆದೇಶಾನುಸಾರ ಮಾತ್ರ ಮಾರಾಟ ಮಾಡಬೇಕು. ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿದೆ ಎಂದು ತಿಳಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಸಣ್ಣವೆಂಕಟೇಶ ಸನಬಾಳ ಮಾತನಾಡಿ, ಪಟಾಕಿ ಹಾಗೂ ಇತರ ಸ್ಫೋಟಕ ವಸ್ತುಗಳನ್ನು ಬಳಸುವಾಗ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ, ಎಸಿ ಶಂಕರಗೌಡ ಸೋಮನಾಳ, ನಗರಸಭೆ ಪೌರಾಯುಕ್ತÜ ರಮೇಶ ಸುಣಗಾರ, ಡಿಎಚ್‌ಒ ಡಾ.ಭಗವಂತ ಅನವಾರ, ಜಿಲ್ಲಾಅಗ್ನಿಶಾಮಕ ಅಧಿಕಾರಿ ಹನುಮನಗೌಡ, ಅಬಕಾರಿ ಇಲಾಖೆ ಜಿಲ್ಲಾವಿಚಕ್ಷಣ ದಳದ ನಿರೀಕ್ಷಕ ಕೇದಾರನಾಥ್‌, ಸಾಹಿತಿ ಅಯ್ಯಣ್ಣ ಹುಂಡೇಕಾರ, ಸಿದ್ದಪ್ಪ ಹೊಟ್ಟಿ, ಬಸವಂತರಾಯ ಮಾಲಿಪಾಟೀಲ್‌, ನಾಗೇಂದ್ರ ಜಾಜಿ, ಚನ್ನಪ್ಪ ಸಾಹು ಠಾಣಗುಂದಿ, ಮೌಲಾಲಿ ಅನಪುರ, ನೂರೊಂದಪ್ಪ ಲೇವಡಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ