ಆ್ಯಪ್ನಗರ

ನರೇಗಾ ಮಾನವ ದಿನ, ಕಾರ್ಮಿಕರ ಭತ್ಯೆ ಹೆಚ್ಚಳಕ್ಕೆ ಆಗ್ರಹ

ತಾಲೂಕಿನ ಚಾಮನಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಮಾನವ ದಿನಗಳನ್ನು ಹೆಚ್ಚಿಸಿ ಕೂಲಿ ಕಾರ್ಮಿಕರ ಭತ್ಯೆ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮನವಿ ಸಲ್ಲಿಸಿದೆ.

Vijaya Karnataka 2 Aug 2019, 9:57 pm
ಯಾದಗಿರಿ:ತಾಲೂಕಿನ ಚಾಮನಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಮಾನವ ದಿನಗಳನ್ನು ಹೆಚ್ಚಿಸಿ ಕೂಲಿ ಕಾರ್ಮಿಕರ ಭತ್ಯೆ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮನವಿ ಸಲ್ಲಿಸಿದೆ.
Vijaya Karnataka Web narega human day demanding increase in labor allowance
ನರೇಗಾ ಮಾನವ ದಿನ, ಕಾರ್ಮಿಕರ ಭತ್ಯೆ ಹೆಚ್ಚಳಕ್ಕೆ ಆಗ್ರಹ


ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಗ್ರಾಮ ಘಟಕದ ಅಧ್ಯಕ್ಷ ಮುದುಕಪ್ಪ ಚಾಮನಳ್ಳಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರದರ್ಶನ ನಡೆಸಿ ಮನವಿ ಸಲ್ಲಿಸಿ, ಯಾದಗಿರಿ ತಾಲ್ಲೂಕಿನ ಚಾಮನಳ್ಳಿ ಗ್ರಾಮದಲ್ಲಿ ನರೇಗಾ (ಉದ್ಯೋಗ ಖಾತ್ರಿ) ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳಲ್ಲಿ ಮಾನವ ದಿನಗಳು ಸ್ಥಳೀಯ ಕೂಲಿ ಕಾಮಿಕರುಗಳಿಗೆ ಸರಿಹೋಗುತ್ತಿಲ್ಲ. ಇದಕ್ಕಾಗಿ ಮಾನವ ದಿನಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮದಲ್ಲಿನ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳು ಸೇರಿದಂತೆ ನಾನಾಕಡೆ ಚರಂಡಿಗಳು ಒಡೆದು ಹೋಗಿ ಕೊಳಚೆ ನೀರು ರಸ್ತೆ ಮೇಲೆ ಹರಿದು ಸಾಂಕ್ರಾಮಿಕ ರೋಗಗಳು ಹರಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಿದರೂ ನಮ್ಮ ಬಳಿ ಅನುದಾನ ಇಲ್ಲ ತಾಲೂಕು ಪಂಚಾಯಿತಿಗೆ ಹೋಗಿ ಎಂದು ಪಿಡಿಓ ಅವರು ಹೇಳುತ್ತಾ ಕಾಲಹರಣ ಮಾಡುತ್ತಿದ್ದು, ಇದರಿಂದ ಸಮಸ್ಯೆ ಉಲ್ಬಣಗೊಂಡಿದೆ. ಮಳೆ ಬಂದರೆ ಸಂಪೂರ್ಣ ರಸ್ತೆ ಚರಂಡಿ ಒಂದೇ ಆಗಿ ಜನರಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮಳೆಯಿಂದ ಅಂಗನವಾಡಿ ಕೇಂದ್ರ ಕುಸಿದು ಬಿದ್ದು ಒಂದು ವರ್ಷವೇ ಆದರೂ ಇದುವರೆಗೆ ಕ್ರಮ ಕೈಗೊಂಡಿಲ್ಲ.

ಕುಡಿವ ನೀರಿನ ಆರ್‌.ಓ. ಪ್ಲಾಂಟ್‌ ಸಿದ್ಧವಾಗಿ ನಿಂತು ಒಂದು ವರ್ಷವಾಗಿದ್ದರೂ ಅದು ಜನತೆಗೆ ಬಳಕೆಗೆ ಸಿಗುತ್ತಿಲ್ಲ. ಗ್ರಾಮದಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ 30 ವರ್ಷಗಳ ಹಿಂದೆ ನಿಮಾಣವಾಗಿದ್ದು ಶಿಥಿಲಗೊಂಡಿದ್ದು ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದ್ದರೂ ಕ್ರಮ ಕೈಗೊಂಡಿಲ್ಲ. ಹೀಗೆ ಹತ್ತು ಹಲವು ಸಮಸ್ಯೆಗಳಿರುವ ಗ್ರಾಮಕ್ಕೆ ವಿಶೇಷ ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್‌ ರಹಿಮಾನ, ಭೀಮರಾಯ ಹಿರೇಕುರುಬರ, ಮಹಾದೇವಪ್ಪಗೌಡ ದೇಶಪಾಂಡೆ, ಕಾಸಿಮ್‌ ಸಾಬ, ಸಾಬಣ್ಣ ಕುರುಬರ, ಮರೆಪ್ಪ, ಹಣಮಂತ, ಮಲ್ಲಮ್ಮ, ಮಹಾಲಿಂಗಮ್ಮ, ಮಲ್ಲಪ್ಪ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ