ಆ್ಯಪ್ನಗರ

ಪ್ಲಾಸ್ಟಿಕ್‌ ಬಳಕೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ

ನಾವು ಬಳಸುವ ಪ್ರತಿ ವಸ್ತುವಿನಲ್ಲಿಪ್ಲಾಸ್ಟಿಕ್‌ ಅಂಶಗಳಿದ್ದೂ, ಇದನ್ನು ಮುಕ್ತ ಮಾಡಲು ಸಾಧ್ಯವಿಲ್ಲ. ಇದರ ಬಳಕೆ ಮಾತ್ರ ಕಡಿಮೆಯಾಗಬೇಕಾಗಿದೆ ಎಂದು ವಿಜ್ಞಾನ ಶಿಕ್ಷಕ ಷಣ್ಮುಖ ಅಭಿಪ್ರಾಯಪಟ್ಟರು.

Vijaya Karnataka 10 Oct 2019, 9:28 pm
ಸೈದಾಪುರ:ನಾವು ಬಳಸುವ ಪ್ರತಿ ವಸ್ತುವಿನಲ್ಲಿಪ್ಲಾಸ್ಟಿಕ್‌ ಅಂಶಗಳಿದ್ದೂ, ಇದನ್ನು ಮುಕ್ತ ಮಾಡಲು ಸಾಧ್ಯವಿಲ್ಲ. ಇದರ ಬಳಕೆ ಮಾತ್ರ ಕಡಿಮೆಯಾಗಬೇಕಾಗಿದೆ ಎಂದು ವಿಜ್ಞಾನ ಶಿಕ್ಷಕ ಷಣ್ಮುಖ ಅಭಿಪ್ರಾಯಪಟ್ಟರು.
Vijaya Karnataka Web peoples cooperation is required to control plastic use
ಪ್ಲಾಸ್ಟಿಕ್‌ ಬಳಕೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ


ಇಲ್ಲಿನ ಸರಕಾರಿ ಹಿರಿಯ ಮಾದರಿಯ ಪ್ರಾಥಮಿಕ ಶಾಲಾವರಣದಲ್ಲಿಗೆಳೆಯರ ಬಳಗದ ವತಿಯಿಂದ ನನ್ನ ಕನಸಿನ ಸೈದಾಪುರ ಎಂಬ ಯೋಜನೆ ಅಡಿಯಲ್ಲಿಹಮ್ಮಿಕೊಂಡ ಪ್ಲಾಸ್ಟಿಕ್‌ ನಿಯಂತ್ರಣ ಹಾಗೂ ಪ್ಲಾಸ್ಟಿಕ್‌ ಬಳಕೆಯನ್ನು ತಡೆಗಟ್ಟುವ ದಿಸೆಯಲ್ಲಿಜನ ಜಾಗೃತಿ ಜಾಥಾ ಕಾರ‍್ಯಕ್ರಮದಲ್ಲಿವಿಶೇಷ ಉಪನ್ಯಾಸ ನೀಡಿ ಮಾತನಾಡಿದರು

. ಪ್ರಪಂಚದ ಪ್ಲಾಸ್ಟಿಕ ಬಳಕೆಯಲ್ಲಿಭಾರತ ದೇಶ 15ನೇ ಸ್ಥಾನದಲ್ಲಿದೆ. ಪ್ರತಿ ಮಿನಿಟಗೆ 5 ಮಿಲಿಯನ ಪ್ಲಾಸ್ಟಿಕ್‌ ಬಳಕೆಯಾಗುತ್ತಿದೆ. ವರ್ಷಕ್ಕೆ ಪ್ರತಿ ವ್ಯಕ್ತಿ 4ಕೆಜಿ ಗಿಂತ ಹೆಚ್ಚು ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದಾನೆ. ಇದಕ್ಕಾಗಿ 5 ಮೆಟ್ರಿಕ್‌ ಟನ್‌ ಉತ್ಪಾದನೆ ಮಾಡಲಾಗುತ್ತಿದೆ. ಇದು ಪರಿಸರ ಸೇರಿದಂತೆ ಆರೋಗ್ಯದ ಮೇಲೆ ಪರಿಣಾಮ ಬೀರಿ ಕ್ಯಾನ್ಸರ್‌, ಕಿಡ್ನಿಯಂಂತಹ ಮಾರಕ ಕಾಯಿಲೆಗಳು ಕಂಡು ಬರುತ್ತಿವೆ. ಸಸ್ತನಿಗಳು ಜಲಚರ ಜೀವಿಗಳು ನಾಶವಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಕಠಿಣÜ ಕಾನೂನು, ಜನ ಜಾಗೃತಿಯ ಮೂಲಕ ಪ್ಲಾಸ್ಟಿಕ್‌ ಬಳಕೆ ಕಡಿಮೆಯಾಗಬೇಕು. ಈ ದಿಸೆಯಲ್ಲಿಪ್ರತಿಯೊಬ್ಬರು ಪ್ರಯತ್ನ ಮಾಡಬೇಕೆಂದು ಕಿವಿ ಮಾತುಗಳನ್ನು ಹೇಳಿದರು.

ಪಿಎಸ್‌ಐ ಗುಂಡುರಾವ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಜೀವನ ಶೈಲಿ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ. ಪ್ರತಿಯೊಬ್ಬರಿಗೂ ಆರೋಗ್ಯಕ್ಕಿಂತ ಸ್ವ ಪ್ರತಿಷ್ಠೆ ಮುಖ್ಯವಾಗಿದೆ. ಇದಕ್ಕಾಗಿ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗಿ ಪರಿಸರದ ಮೇಲೆ ಪರಿಣಾಮವನ್ನುಂಟು ಮಾಡುವಂತಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮದ ಯುವಕರು ಪ್ಲಾಸ್ಟಿಕ್‌ ಮುಕ್ತ ಸೈದಾಪುರಕ್ಕಾಗಿ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ.

ಇದಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಆ ಮೂಲಕ ಯುವಕರ ಸೇವಾ ಮನೋಭಾನೆಗೆ ಪ್ರೋತ್ಸಾಹಿಸುವ ಕೆಲಸವಾಗಬೇಕೆಂದು ಕಿವಿ ಮಾತುಗಳನ್ನು ಹೇಳಿದರು.

ಶಾಲಾ ಮುಖ್ಯಗುರು ಸೋಮರೆಡ್ಡಿ, ವಿ.ವ.ಪ್ರೌಢ ಶಾಲಾ ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲರಾದ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಪಿಡಿಓ ಶಂಕರಪ್ಪ ಸೇರಿದಂತೆ ಪಟ್ಟಣದ ಗೆಳೆಯರ ಬಳಗದ ಯುವಕರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ