ಆ್ಯಪ್ನಗರ

ಕೆರೆ ಹೂಳೆತ್ತುವ ಕೆಲಸ ಮಾಡಿಸಲು ಆಗ್ರಹ

ಮಳೆ ಕೊರತೆ ಹಾಗೂ ಈಗಾಗಲೇ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಜಿಲ್ಲೆಯಲ್ಲಿರುವ ಕೆರೆ, ಹಳ್ಳಗಳು ಬತ್ತಿ ಹೋಗಿವೆ. ಹೀಗಾಗಿ ಕೆರೆಗಳ ಹೂಳೆತ್ತುವ ಮತ್ತು ತುಂಬಿಸುವ ಕಾರ್ಯವನ್ನು ಮಾಡಬೇಕೆಂದು ಟೋಕ್ರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

Vijaya Karnataka 14 Mar 2019, 5:00 am
ವಡಗೇರಾ:ಮಳೆ ಕೊರತೆ ಹಾಗೂ ಈಗಾಗಲೇ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಜಿಲ್ಲೆಯಲ್ಲಿರುವ ಕೆರೆ, ಹಳ್ಳಗಳು ಬತ್ತಿ ಹೋಗಿವೆ. ಹೀಗಾಗಿ ಕೆರೆಗಳ ಹೂಳೆತ್ತುವ ಮತ್ತು ತುಂಬಿಸುವ ಕಾರ್ಯವನ್ನು ಮಾಡಬೇಕೆಂದು ಟೋಕ್ರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.
Vijaya Karnataka Web responsible for the fishermen in the district
ಕೆರೆ ಹೂಳೆತ್ತುವ ಕೆಲಸ ಮಾಡಿಸಲು ಆಗ್ರಹ


ತಾಲೂಕಿನ ತಡಿಬಿಡಿ ಗ್ರಾಮದ ಕೆರೆಯ ಆವರಣದಲ್ಲಿ ನಡೆದ ಕೋಲಿ ಸಮಾಜದ ಸಭೆಯಲ್ಲಿ ಅವರು ಮಾತನಾಡಿದರು.

ಕೆರೆಗಳು ಸಂಪೂರ್ಣವಾಗಿ ಬತ್ತಿರುವುದರಿಂದ ಜಾನುವಾರುಗಳಿಗೆ ಕುಡಿಯಲು ನೀರು ಸಹ ಸಿಗುತ್ತಿಲ್ಲ. ಬೇಸಿಗೆಯ ಆರಂಭದಲ್ಲಿಯೇ ಸಾಕಷ್ಟು ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೀಗಾಗಿ ಜಿಲ್ಲೆಯಲ್ಲಿರುವ ಕೆರೆಗಳನ್ನು ಹೂಳೆತ್ತಲು ತಕ್ಷಣ ಕ್ರಮ ಕೈಗೊಳ್ಳಬೇಕು. ಈಗ ಕೆರೆಯಲ್ಲಿ ನೀರಿಲ್ಲದಿರುವುದರಿಂದ ಹೂಳೆತ್ತಲು ಅನುಕೂಲವಾಗುವುದು. ಅಲ್ಲದೇ ಫಲವತ್ತಾದ ಮೆಕ್ಕಲು ಮಣ್ಣು ರೈತರಿಗೆ ಉಚಿತವಾಗಿ ಕೃಷಿ ಇಲಾಖೆಯಿಂದಲೇ ಸರಬರಾಜು ಮಾಡುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಬರಗಾಲವಿರುವುದರಿಂದ ಜನರು ಕೆಲಸವಿಲ್ಲದೇ ತುಂಬಾ ಕಷ್ಟದಲ್ಲಿದ್ದಾರೆ. ಆಯಾ ಗ್ರಾಮ ಪಂಚಾಯಿತಿಗಳು ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸ ಮಾಡಿಸಿ ಜನರಿಗೆ ಉದ್ಯೋಗವನ್ನು ದೊರಕಿಸಿಬೇಕು ಎಂದು ಆಗ್ರಹಿಸಿದರು.

ಕೆರೆಗಳ ಹೂಳೆತ್ತುವ ಕಾರ್ಯದ ಜತೆಗೆ ಕೆರೆಗಳಿಗೆ ನೀರು ತುಂಬಿಸಿ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಅನುಕೂಲ ಮಾಡಬೇಕು. ಜಿಲ್ಲೆಯಲ್ಲಿ ಇರುವ ಕೆರೆಗಳಲ್ಲಿ ಮೀನುಗಾರಿಕೆಯನ್ನು ಮಾಡಲು ಅನ್ಯ ಜಿಲ್ಲೆಯವರಿಗೆ ಇಲ್ಲವೇ ಪ್ರಭಾವಿ ವ್ಯಕ್ತಿಗಳಿಗೆ ವಹಿಸಿಕೊಡದೇ ನೈಜ ಮೀನುಗಾರರಿಗೆ ಗುತ್ತಿಗೆಯನ್ನು ವಹಿಸಿಕೊಡಬೇಕು.

ಈ ಹಿಂದೆ ಬೇರೆ ಜಿಲ್ಲೆಯಿಂದ ಬರುವವರು ಮೀನುಗಾರರಲ್ಲದವರಿಗೆ ಈ ಕೆರೆಗಳನ್ನು ವಹಿಸಿಕೊಡಲಾಗುತ್ತಿತ್ತು. ಜಿಲ್ಲೆಯಲ್ಲಿನ ಕೆಲವರು ಮೀನುಗಾರರಲ್ಲದವರು ಕೆರೆಗಳನ್ನು ಗುತ್ತಿಗೆ ಪಡೆದುಕೊಂಡು ಬೇರೆಯವರ ಹತ್ತಿರ ಹೆಚ್ಚಿನ ಹಣ ಪಡೆದು ಅವರಿಗೆ ಕೊಡುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಅವರು ಪ್ರಶ್ನಿಸಿದರು.

ನಿಜವಾದ ಮೀನುಗಾರರಿಗೆ ಸರಕಾರದ ಸೌಲತ್ತುಗಳು ಲಭಿಸುತ್ತಿಲ್ಲ. ಆದ್ದರಿಂದ ತಿಂಗಳಿಗೊಮ್ಮೆ ಸಭೆ ನಡೆಸಿ ಸಭೆಯಲ್ಲಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಜಿಲ್ಲಾ,. ತಾಲೂಕು ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಚುನಾವಣೆ ನೀತಿ ಸಂಹಿತೆ ನೆಪ ಹೇಳದೇ ಆದ್ಯತೆ ಮತ್ತು ಅತ್ಯವಶ್ಯಕ ಕೆಲಸ ಎಂದು ಇದನ್ನು ಪರಿಗಣಿಸಿ ಕಾಮಗಾರಿ ಆರಂಭಿಸಬೇಕು. ದಿನನಿತ್ಯ ಕೆಲಸ ನಡೆಸಬೇಕು, ನೆಪ ಹೇಳಿದರೆ ಆಯಾ ಪಂಚಾಯಿತಿ ಪಿಡಿಓ ಅವರನ್ನೇ ಹೊಣೆಯಾಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಲಕ್ಷ್ಮಣ, ನಾಗಪ್ಪ, ಮಲ್ಲಿಕಾರ್ಜುನ, ಶಿವರಾಜ, ಶಂಕರ, ರವಿಕುಮಾರ, ರಡ್ಡೆಪ್ಪ, ಯಂಕಪ್ಪ, ಶಿವಪ್ಪ, ದೇವಪ್ಪ, ಬಸವರಾಜ, ಶರಣಪ್ಪ, ಯಲ್ಲಪ್ಪ ಹಾಗೂ ಅಂಬಿಗರ ಚೌಡಯ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ