ಆ್ಯಪ್ನಗರ

ಯಾದಗಿರಿಯಲ್ಲಿ ಜವರಾಯನ ಅಟ್ಟಹಾಸ: ಒಂದೇ ಕುಟುಂಬದ ಆರು ಜನ ದಾರುಣ ಸಾವು

ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಮರಳುವಾಗ ಜವರಾಯ ಅಟ್ಟಹಾಸ ಮೆರೆದಿದ್ದು, ಒಂದೇ ಕುಟುಂಬದ ಆರು ಜನ ಮೃತಪಟ್ಟಿರುವ ದಾರುಣ ದುರ್ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದಿದೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ತೆಲಂಗಾಣದ ಕೊಡಂಗಲ್ ನಲ್ಲಿರುವ ದರ್ಗಾದಲ್ಲಿ ಮತೃ ಮಗು ಉಮೇಜಾ ಜವಳ‌ ಕಾರ್ಯಕ್ರಮ ಮುಗಿಸಿಕೊಂಡ ವಾಪಸ್ಸಾಗುವಾಗ ಎದುರಿಗೆ ಬಂದ ಲಾರಿ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಮೂರು ಜನ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

Lipi 5 Aug 2022, 8:50 am
ಯಾದಗಿರಿ: ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಮರಳುವಾಗ ಜವರಾಯ ಅಟ್ಟಹಾಸ ಮೆರೆದಿದ್ದು, ಒಂದೇ ಕುಟುಂಬದ ಆರು ಜನ ಮೃತಪಟ್ಟಿರುವ ದಾರುಣ ದುರ್ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದಿದೆ.
Vijaya Karnataka Web road_accident.


ಭೀಕರ ಅಪಘಾತದಲ್ಲಿ ಮಹ್ಮದ್ ವಾಜೀದ್ ಹುಸೇನ್ (39), ಮಹಮ್ಮದ್ ಮಜರ್ ಹುಸೇನ್ (79), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಉಮೇಜಾ(6 ತಿಂಗಳ ಮಗು) ಅಪಘಾತದಲ್ಲಿ ಮೃತಪಟ್ಟಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್ ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿಯಲ್ಲಿ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು; ಇಬ್ಬರಿಗೆ ಗಂಭೀರ ಗಾಯ!
ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ತೆಲಂಗಾಣದ ಕೊಡಂಗಲ್ ನಲ್ಲಿರುವ ದರ್ಗಾದಲ್ಲಿ ಮತೃ ಮಗು ಉಮೇಜಾ ಜವಳ‌ ಕಾರ್ಯಕ್ರಮ ಮುಗಿಸಿಕೊಂಡ ವಾಪಸ್ಸಾಗುವಾಗ ಎದುರಿಗೆ ಬಂದ ಲಾರಿ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಮೂರು ಜನ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಇನ್ನು ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ‌. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಭೇಟಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜವಳ‌ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

ಮುಂದಿನ ಲೇಖನ