ಆ್ಯಪ್ನಗರ

ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ | ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ

ಮೂವರು ಅಪರಿಚಿತ ವ್ಯಕ್ತಿಗಳನ್ನು ಮಕ್ಕಳ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಗುಂಜನೂರ ಗ್ರಾಮದ ಗುಂಜಲಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

Vijaya Karnataka 18 May 2018, 5:26 pm
ಗುರುಮಠಕಲ್‌ : ಮೂವರು ಅಪರಿಚಿತ ವ್ಯಕ್ತಿಗಳನ್ನು ಮಕ್ಕಳ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಗುಂಜನೂರ ಗ್ರಾಮದ ಗುಂಜಲಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
Vijaya Karnataka Web stoning on a police vehicle visit the sp to the venue
ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ | ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ


ಮೂವರು ಅಪರಿಚಿತರಲ್ಲಿ ಓರ್ವ ಗ್ರಾಮದ ಹೊರವಲಯದ ಹೊಲದಲ್ಲಿ ಕೊಡಲಿ ಹಿಡಿದುಕೊಂಡು ನಿಂತಿದ್ದ.ಇನ್ನೊರ್ವ ಅವರಲ್ಲಿ ಮರ ಹತ್ತಿ ಕುಳಿತಿದ್ದನ್ನು ಬಾಲಕನೋರ್ವ ಗಮನಿಸಿ ಗ್ರಾಮಸ್ಥರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರಿಂದ ಗ್ರಾಮಸ್ಥರು ಅಪರಿಚಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಮಕ್ಕಳ ಅಪಹರಣಕಾರರು ಬರುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಇವರು ಮಕ್ಕಳ ಅಪಹರಣಕಾರರೆಂದೇ ಭಾವಿಸಿ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಗ್ರಾಮಕ್ಕೆ ಆಗಮಿಸಿ ವಿಚಾರಣೆಗಾಗಿ ಅಪರಿಚಿತರನ್ನು ವಶಕ್ಕೆ ಪಡೆಯವ ವೇಳೆ ಏಕಾಏಕಿ ಕೆಲ ಕಿಡಿಗೇಡಿಗಳು ಪೊಲೀಸ್‌ ವಾಹನಕ್ಕೆ ಕಲ್ಲು ಎಸೆದಿದ್ದಾರೆ. ಪಿಎಸ್‌ಐ ವಾಹನದ ಮುಂದಿನ ಗಾಜು ಒಡೆದು ಹೋಗಿದೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರಿಂದ ಗೂಸಾ ತಿಂದಿರುವ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪಿಎಸ್‌ಐ ಅರುಣ ಕುಮಾರ ಚಿಕಿತ್ಸೆಗಾಗಿ ಗುರುಮಠಕಲ್‌ ಸಾರ್ವಜನಿಕರ ಆಸ್ಪತ್ರೆಗೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಕದೊಂದಿಗೆ ಸಿಪಿಐ ಶಿವಾನಂದ ವಾಲಿಕಾರ್‌ ಮಾತನಾಡಿ, ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ