ಆ್ಯಪ್ನಗರ

ಯೋಗ ದಿನ ಅರ್ಥಪೂರ್ಣ ಆಚರಣೆಗೆ ಸೂಚನೆ

ನಗರದ ಸರಕಾರಿ ಪಪೂ ಕಾಲೇಜು ಮೈದಾನದಲ್ಲಿ ಜೂ.21ರಂದು ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ ಸೂಚಿಸಿದರು.

Vijaya Karnataka 14 Jun 2019, 5:00 am
ಯಾದಗಿರಿ:ನಗರದ ಸರಕಾರಿ ಪಪೂ ಕಾಲೇಜು ಮೈದಾನದಲ್ಲಿ ಜೂ.21ರಂದು ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ ಸೂಚಿಸಿದರು.
Vijaya Karnataka Web yoga day is an indication of meaningful practice
ಯೋಗ ದಿನ ಅರ್ಥಪೂರ್ಣ ಆಚರಣೆಗೆ ಸೂಚನೆ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷ ತೆವಹಿಸಿ ಮಾತನಾಡಿದರು. ಸಿಎಂ ಗುರುಮಠಕಲ್‌ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲು ಅದೇ ದಿನ ಜಿಲ್ಲೆಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಗ್ರಾಮ ವಾಸ್ತವ್ಯ ಪೂರ್ವಸಿದ್ಧತೆಗೆ ಹೆಚ್ಚು ಒತ್ತು ನೀಡಿದರೂ ಯೋಗ ದಿನಾಚರಣೆಗೆ ಯಾವುದೇ ತೊಂದರೆ ಉಂಟಾಗಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಜಿಲ್ಲಾಡಳಿತ, ಆಯುಷ್‌ ಇಲಾಖೆ ಹಾಗೂ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಯೋಗ ದಿನಾಚರಣೆಯಂದು ಬೆಳಗ್ಗೆ 6.45ರಳೊಗೆ ಎಲ್ಲ ಅಧಿಕಾರಿ, ಸಿಬ್ಬಂದಿ ಕಾಲೇಜು ಮೈದಾನದಲ್ಲಿ ಹಾಜರಿರಬೇಕು. ಬೆಳಗ್ಗೆ 6.45ರಿಂದ 7ರ ವರೆಗೆ ಧ್ಯಾನ, ಭಾರತ ಸರಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 7ರಿಂದ 7.55ರ ವರೆಗೆ ಯೋಗ ಮಾಡಬೇಕು. ನಂತರ 8ರಿಂದ 8.30ರ ವರೆಗೆ ವೇದಿಕೆ ಕಾರ್ಯಕ್ರಮ ನಡೆಸಬೇಕು. ತದನಂತರ 8.30ರಿಂದ ಉಪಾಹಾರ ವಿತರಿಸಬೇಕು. ಯೋಗ ಕಾರ್ಯಕ್ರಮಕ್ಕಾಗಿ ನಿಗದಿಪಡಿಸಿದ ಸಮಯದಲ್ಲಿ ವ್ಯತ್ಯಾಸವಾಗಬಾರದು ಎಂದು ನಿರ್ದೇಶಿಸಿದರು.

ದಿನಾಚರಣೆ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನವನ್ನು ಸ್ವಚ್ಛಗೊಳಿಸಿ, ಮೈದಾನದಲ್ಲಿ ಕಸದ ತೊಟ್ಟಿಗಳು, ಕುಡಿಯುವ ನೀರು ಹಾಗೂ ವೇದಿಕೆ ಮೇಲೆ ಗಣ್ಯರಿಗಾಗಿ ಆಸನಗಳ ವ್ಯವಸ್ಥೆ ಮಾಡುವಂತೆ ನಗರಸಭೆ ಪೌರಾಯುಕ್ತರಾದ ರಮೇಶ ಸುಣಗಾರಗೆ ಸೂಚಿಸಿದರು.

ಅಂದು ಮಳೆ ಬಂದರೆ ನಗರದ ಯಾವುದಾದರೂ ಛಾವಣಿ ಇರುವ ಸ್ಥಳ ಗುರುತಿಸಿ, ಕಾರ್ಯಕ್ರಮ ನಡೆಸಲು ಸಿದ್ಧರಿರಬೇಕು. ದಿನಾಚರಣೆ ನಿಮಿತ್ತ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯೋಗ ಸ್ಪರ್ಧೆ, ನಿಬಂಧ ಸ್ಪರ್ಧೆ ಆಯೋಜಿಸಬೇಕು. ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು, ಎನ್ನೆಸ್ಸೆಸ್‌ ವಿದ್ಯಾರ್ಥಿಗಳು, ನಗರದ ಎಲ್ಲ ಶಾಲೆ ಮಕ್ಕಳು ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜೂ.20ರಂದು ಬೆಳಗ್ಗೆ 8ಕ್ಕೆ ಯಾದಗಿರಿ ನಗರದ ಸ್ಟೇಷನ್‌ ಏರಿಯಾದಲ್ಲಿ ಹಾಗೂ ಬೆಳಗ್ಗೆ 10.30ಕ್ಕೆ ನಗರ ಪ್ರದೇಶದಲ್ಲಿ ಜಾಗೃತಿ ಜಾಥಾ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಪ್ರಕಾಶ ರಾಜಾಪುರ, ಡಾ.ರಮೇಶ ಸಜ್ಜನ್‌, ಡಾ.ಶಿವಲಿಂಗಪ್ಪ ಪಾಟೀಲ್‌, ಜಿಲ್ಲಾ ಆರೋಗ್ಯ ಶಿಕ್ಷ ಣಾಧಿಕಾರಿ ಬಿರಾದಾರ ಶಂಕರ, ಜಿಲ್ಲಾ ದೈಹಿಕ ಶಿಕ್ಷ ಣಾಧಿಕಾರಿ ಕೆ.ವಿಶ್ವನಾಥ, ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಅನಿಲ್‌ ಗುರೂಜಿ, ಬಸವ ಯೋಗ ಸಮಿತಿ ಚಾರಿಟೆಬಲ್‌ ಟ್ರಸ್ಟ್‌ನ ಸೋಮನಾಥರೆಡ್ಡಿ ಕಣೇಕಲ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥ್ಲೆಟಿಕ್ಸ್‌ ತರಬೇತುದಾರ ದೊಡ್ಡಪ್ಪ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ