ಶಿಕಾರಿಪುರದಿಂದ ಯಡಿಯೂರಪ್ಪ ಸ್ಪರ್ಧೆ | ರಾಘವೇಂದ್ರ ಎಲ್ಲಿಗೆ?
ಸಂತೋಷ್ ಕಾಚಿನಕಟ್ಟೆ
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟು ಸಂಚರಿಸುತ್ತಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿ.ಎಸ್.ಯಡಿಯೂರಪ್ಪ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಯೋಗಕ್ಕಿಳಿಯದೆ ಶಿಕಾರಿಪುರದಿಂದಲೆ ಸ್ಪರ್ಸುವುದು ಬಹುತೇಕ ಖಚಿತವಾಗಿದೆ.
ಯಡಿಯೂರಪ್ಪ ಸೊರಬ ಇಲ್ಲವೆ ಭದ್ರಾವತಿಯಲ್ಲಿ ಕಣಕ್ಕಿಳಿಯಬಹುದು ಎಂಬ ಚರ್ಚೆ ನಡೆದಿತ್ತು. ವೈಯಕ್ತಿಕ ವರ್ಚಸ್ಸಿನಿಂದಾಗಿ ಜಿಲ್ಲೆಯ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ಛಾತಿ ಇರುವ ಕಾರಣಕ್ಕೆ ಅವರು ಕ್ಷೇತ್ರ ಬದಲಿಸಬಹುದೆಂದು ಹೇಳಲಾಗುತ್ತಿತ್ತು. ಆದರೆ ಈ ಊಹಾಪೋಹಗಳಿಗೆ ಸ್ವತಃ ಅವರೇ ಬ್ರೇಕ್ ಹಾಕಿದ್ದಾರೆ. ಶಿಕಾರಿಪುರದಲ್ಲೇ ಸ್ಪರ್ಧಿಸುವುದಾಗಿ ಬಿಎಸ್ವೈ ಕಳೆದ 4 ದಿನಗಳಲ್ಲಿ ಎರಡು ಬಾರಿ ಹೇಳಿದ್ದಾರೆ. ಹಾಗಾಗಿ ಈಗ ಶಿಕಾರಿಪುರ ಕ್ಷೇತ್ರವನ್ನು ಪ್ರತಿನಿಸುತ್ತಿರುವ ಬಿ.ವೈ. ರಾಘವೇಂದ್ರ, ಅಪ್ಪನಿಗಾಗಿ ಕ್ಷೇತ್ರ ತ್ಯಾಗ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಯಡಿಯೂರಪ್ಪ ಕೆಜೆಪಿಯಿಂದ ಬಿಜೆಪಿಗೆ ಮರಳಿದ ಬಳಿಕ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಆಗ ಶಿಕಾರಿಪುರಕ್ಕೆ ನಡೆದ ಉಪಚುನಾವಣೆಯಲ್ಲಿ ರಾಘವೇಂದ್ರರನ್ನು ಕಣಕ್ಕಿಳಿಸಿದ್ದರು. ಈಗ ಯಡಿಯೂರಪ್ಪ ವಾಪಸ್ ಶಿಕಾರಿಪುರಕ್ಕೆ ಬರುವುದಾದರೆ ರಾಘವೇಂದ್ರ ಅವರ ಭವಿಷ್ಯ ಏನು ಎಂಬ ಪ್ರಶ್ನೆ ಬಿಜೆಪಿ ಕಾರ್ಯಕರ್ತರಲ್ಲಿ ಮೂಡಿದೆ.
ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಮಾತ್ರವಲ್ಲದೆ ಪಕ್ಷದ ಸ್ಟಾರ್ ಪ್ರಚಾರಕರೂ ಆಗಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ತಮ್ಮ ಕ್ಷೇತ್ರಕ್ಕಷ್ಟೆ ಸೀಮಿತವಾಗದೆ ರಾಜ್ಯದೆಲ್ಲೆಡೆ ಸಂಚರಿಸಬೇಕಾಗುತ್ತದೆ. ಈ ಸಮಯದಲ್ಲಿ ಕ್ಷೇತ್ರ ಬದಲಾವಣೆ ಮಾಡಿ ಪ್ರಯೋಗಕ್ಕೆ ಮುಂದಾದರೆ ಬೇರೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೆಚ್ಚಿನ ಸಮಯ ಕೊಡಬೇಕಾಗುತ್ತದೆ. ತಮ್ಮ ಗೆಲುವಿಗಾಗಿ ಕ್ಷೇತ್ರದಲ್ಲಿಯೇ ಉಳಿದುಕೊಂಡರೆ ರಾಜ್ಯದೆಲ್ಲೆಡೆ ಪ್ರವಾಸ ನಡೆಸಲು ಸಾಧ್ಯವಾಗುವುದಿಲ್ಲ. ಪ್ರವಾಸ ಹೊರಟರೆ ತಮ್ಮ ಕ್ಷೇತ್ರದಲ್ಲೇ ಹಿನ್ನಡೆ ಅನುಭವಿಸುವ ಅಪಾಯವಿರುತ್ತದೆ. ಹಾಗಾಗಿ ಯಡಿಯೂರಪ್ಪ ಶಿಕಾರಿಪುರದಲ್ಲೇ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
ಶಿಕಾರಿಪುರದಲ್ಲಿ ಕುಟುಂಬ ವರ್ಗದವರಿಗೆ ಹೆಚ್ಚು ಹಿಡಿತ ಇದೆ. ಸ್ಥಳೀಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರೇ ಪ್ರಚಾರದ ಜವಾಬ್ದಾರಿ ನೋಡಿಕೊಳ್ಳುತ್ತಾರೆ. ಯಡಿಯೂರಪ್ಪ ಒಂದೆರಡು ಬಾರಿ ಬಂದು ಹೋದರೆ ಸಾಕು. ಈ ಹಿಂದಿನ ಎರಡು ಚುನಾವಣೆಗಳಲ್ಲೂ ಯಡಿಯೂರಪ್ಪ ಇದೇ ರೀತಿ ಮಾಡಿದ್ದರು.
ಈಗ ಅವರು ಮತ್ತೆ ವಿಧಾನಸಭೆ ಪ್ರವೇಶಿಸಿದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿಗೆ ಲೋಕಸಭೆ ಅವ ಮುಗಿಯಲು ಇನ್ನೂ ಒಂದೂವರೆ ವರ್ಷ ಬಾಕಿ ಇರುತ್ತದೆ. ಆಗ ಶಿವಮೊಗ್ಗ ಲೋಕಸಭೆಗೆ ನಡೆಯುವ ಉಪಚುನಾವಣೆಯಲ್ಲಿ ರಾಘವೇಂದ್ರರನ್ನೇ ಕಣಕ್ಕಿಳಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.