ದಕ್ಷಿಣ ಭಾರತದಲ್ಲಿರುವ ದೇಗುಲಗಳ ಪೈಕಿ ಪ್ರಸಿದ್ಧವಾದ ದೇವಸ್ಥಾನವೆಂದರೆ ಶಬರಿಮಲೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟದ ಪರ್ವತಶ್ರೇಣಿಯಲ್ಲಿರುವ ಈ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿಯು ನೆಲೆಸಿದ್ದಾನೆ. ದಟ್ಟ ಕಾನನದಲ್ಲಿರುವ ಈ ಪುರಾತನ ದೇವಾಲಯವು ನಿರ್ಮಾಣಗೊಂಡ ಮೂರು ಶತಮಾನಗಳ ಕಾಲ ದರ್ಶನಕ್ಕೆ ಅಲಭ್ಯವಾಗಿ ಉಳಿದಿತ್ತು. 12ನೇ ಶತಮಾನದಲ್ಲಿ ಪಂದಳಂನ ರಾಜ ಮಣಿಕಂದನ್ ಶಬರಿಮಲೆ ದೇವಸ್ಥಾನದ ಪಥವನ್ನು ಮರಳಿ ಕಂಡು ಹಿಡಿದನೆಂದು ಹೇಳಲಾಗುತ್ತದೆ.
ಶಬರಿಮಲೆಯ ಈ ದೇಗುಲದ ಇನ್ನೊಂದು ವಿಶೇಷತೆ ಎಂದರೆ ಇಲ್ಲಿ ತೆರಳುವಂತಹ ಭಕ್ತರು 41ದಿನಗಳ ಕಡ್ಡಾಯ ವೃತವನ್ನು ಪಾಲಿಸಬೇಕು. ಈ ದೇಗುಲದಲ್ಲಿ ನವೆಂಬರ್ನಿಂದ ಡಿಸೆಂಬರ್ವರೆಗೂ ಮೂರು ತಿಂಗಳ ಕಾಲ ವಾರ್ಷಿಕ ಪೂಜಾ ಕಾರ್ಯ ಆರಂಭವಾಗುತ್ತದೆ. ವ್ರತ ಕೈಗೊಂಡು ಮಾಲೆ ಹಾಕಿದ ಭಕ್ತರು ನವೆಂಬರ್ನಿಂದ ಜನವರಿವರೆಗೆ ವಾರ್ಷಿಕ ಪ್ರವೇಶದ ಸಮಯದಲ್ಲಿ ದರ್ಶನವನ್ನು ಮಾಡುತ್ತಾರೆ. ಜನವರಿ 14ರ ಮಕರ ಸಂಕ್ರಾಂತಿ, ಏಪ್ರಿಲ್ 14ರ ವಿಷು ಸಂಕ್ರಾಂತಿ ಹಾಗೂ ಪ್ರತಿ ಮಲಯಾಳಂ ಮಾಸದ ಮೊದಲ ಐದು ದಿನ ಅಯ್ಯಪ್ಪನ ದರ್ಶನವನ್ನು ಮಾಡಬಹುದು.
ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವುದರ ಹಿಂದಿನ ಮಹತ್ವವೇನು ಗೊತ್ತಾ?
ಏಳು ಮಲೆಗಳನ್ನು ಸುತ್ತಿ, ಹದಿನೆಂಟು ಮೆಟ್ಟಿಲುಗಳನ್ನು ಹತ್ತಿ ಅಯ್ಯಪ್ಪನ ದರ್ಶನ ಪಡೆಯಬೇಕೆಂದರೆ ಮಾಲಾಧಾರಣೆಯನ್ನು ಮಾಡಬೇಕು. ಮಾಲಾಧಾರಣೆಯನ್ನು ಮಾಡುವವರು 41 ದಿನಗಳ ವ್ರತಾಚರಣೆ ಮಾಡುವುದು ಕಡ್ಡಾಯ. ಸನಾತನ ಧರ್ಮದ ಪ್ರಕಾರ ಮನುಷ್ಯನು ಭಗವಂತನಲ್ಲಿ ಐಕ್ಯವಾಗಲು ರಾಜ ಯೋಗ, ಭಕ್ತಿ ಯೋಗ, ಕರ್ಮ ಯೋಗ, ಜ್ಞಾನ ಯೋಗ ಎಂಬ ಮಾರ್ಗಗಳಿವೆ. ಅಯ್ಯಪ್ಪ ವ್ರತ ಮಾಡುವವರು ಭಕ್ತಿಯೋಗದ ಮೂಲಕ ದೈವ ಸ್ವರೂಪದ ಅನುಭವವನ್ನು ಪಡೆಯುತ್ತಾರೆ ಎನ್ನಲಾಗುತ್ತದೆ.
ಅಯ್ಯಪ್ಪ ವ್ರತಾಚರಣೆಯ ನಿಯಮಗಳು
* ಶಬರಿಮಲೆಗೆ ಹೋಗುವ ಮುನ್ನ 41 ದಿನ ಕಠಿಣ ವ್ರತ ಪಾಲಿಸಬೇಕು.
* ಮುಂಜಾನೆ ಎದ್ದು ತಣ್ಣೀರಿನಲ್ಲಿ ಮಿಂದು ಮಡಿಯನ್ನುಟ್ಟು ಅಯ್ಯಪ್ಪನಾಮ ಜಪಿಸುತ್ತಾ ಅಯ್ಯಪ್ಪನಿಗೆ ಪೂಜೆ ಸಲ್ಲಿಸಬೇಕು,ಅಯ್ಯಪ್ಪನಿಗೆ ಪ್ರಾತಃಪೂಜೆ ಮತ್ತು ಸಂಧ್ಯಾಪೂಜೆ ಮಾಡಿ ನೈವೇದ್ಯ ಅರ್ಪಿಸಬೇಕು.
*ಅಯ್ಯಪ್ಪ ಮಾಲೆ ಧರಿಸಿದವರು ದಿನ 24 ಗಂಟೆಯೂ ಅಯ್ಯಪ್ಪನ ಜಪ ಮಾಡಬೇಕು. ಈ ಸಂದರ್ಭದಲ್ಲಿ ಯಾವುದೇ ಕೆಟ್ಟ ಯೋಚನೆ ಮಾಡಬಾರದು
* ಸ್ವತಃ ಅಥವಾ ಅಯ್ಯಪ್ಪ ಮಾಲಾಧಾರಿ ತಯಾರಿಸಿದ ಆಹಾರ ಮಾತ್ರ ಸೇವಿಸಬೇಕು, ಅದು ಒಂದು ಹೊತ್ತು ಮಾತ್ರ ಊಟ ಮಾಡಬೇಕು. ಬೆಳಗ್ಗೆ ಹಾಗೂ ಸಾಯಂಕಾಲ ಅಲ್ಪಾಹಾರ ಸೇವಿಸಬೇಕು.
*ವೃತಾವಧಿಯಲ್ಲಿ ಮಾಂಸಾಹಾರ ಸೇವನೆ, ಮದ್ಯಪಾನ, ತಂಬಾಕು ಸೇವನೆ ಮಾಡಬಾರದು.
* ತಲೆಕೂದಲು ಹಾಗೂ ಉಗುರುಗಳನ್ನು ಕತ್ತರಿಸಬಾರದು
* ದಿನದಲ್ಲಿ ಎರಡು ಬಾರಿ ಸ್ನಾನ ಮಾಡಿ, ಸ್ಥಳೀಯ ದೇವಸ್ಥಾನಕ್ಕೆ ಹೋಗಿ ಬರಬೇಕು.
ಮನೋ ಕಾಮನೆಗಳ ಈಡೇರಿಕೆಗೆ ಆಲದ ಮರದ ಪೂಜೆಯೊಂದೇ ಉತ್ತಮ ಮಾರ್ಗ...
* ಕಪ್ಪು ಬಣ್ಣದ ಅಥವಾ ಕಾವಿ ಬಟ್ಟೆ ಧರಿಸಬೇಕು.
* ವ್ರತಧಾರಿಯು ತುಳಸಿ ಮಾಲೆ ಮತ್ತು ರುದ್ರಾಕ್ಷಿಯನ್ನು ಧರಿಸಿರಬೇಕು
* ಮನೆಯಿಂದ ದೂರವಿದ್ದು ಪ್ರತ್ಯೇಕವಾಗಿ ಅಥವಾ ದೇವಸ್ಥಾನದ ಬಳಿ ವಾಸಿಸಬೇಕು.
* ಹಿರಿಯರನ್ನಾಗಲಿ, ಕಿರಿಯರನ್ನಾಗಲಿ ಇತರರನ್ನು ಕೂಡ ‘ಅಯ್ಯಪ್ಪ’ ಎಂದೇ ಸಂಬೋಧಿಸಬೇಕು.
* ಹೆಂಗಸರನ್ನು, ಹೆಂಡತಿಯನ್ನು ‘ಮಾತಾ / ಅಮ್ಮ’ ಎಂದು ಕರೆಯಬೇಕು
* ಚಪ್ಪಲಿಯನ್ನು ಧರಿಸಬಾರದು, ಕಾಲುನಡಿಗೆಯಲ್ಲಿ ತೆರಳಬೇಕು
* ಅಯ್ಯಪ್ಪ ಮಾಲೆ ಧರಿಸಿದವರೆಲ್ಲರಿಗೂ ವಯೋಮಾನದ ಭೇದವಿಲ್ಲದೆ ಕಾಲಿಗೆ ನಮಸ್ಕರಿಸಬೇಕು
*ಅಯ್ಯಪ್ಪ ದೀಕ್ಷೆ ಪಡೆದವರು ನೆಲದ ಮೇಲೆ ಮಲಗಬೇಕು.
ಕಾರ್ತಿಕ ಮಾಸದ ಆರಾಧನೆಯಿಂದ ನಿಮ್ಮ ಭವಿಷ್ಯವೇ ಬದಲಾಗುವುದು..!
ಅಯ್ಯಪ್ಪ ವ್ರತ ನಿಯಮದ ಪ್ರಾಮುಖ್ಯತೆ
ಶಬರಿಮಲೆಯ ಈ ದೇಗುಲದ ಇನ್ನೊಂದು ವಿಶೇಷತೆ ಎಂದರೆ ಇಲ್ಲಿ ತೆರಳುವಂತಹ ಭಕ್ತರು 41ದಿನಗಳ ಕಡ್ಡಾಯ ವೃತವನ್ನು ಪಾಲಿಸಬೇಕು. ಈ ದೇಗುಲದಲ್ಲಿ ನವೆಂಬರ್ನಿಂದ ಡಿಸೆಂಬರ್ವರೆಗೂ ಮೂರು ತಿಂಗಳ ಕಾಲ ವಾರ್ಷಿಕ ಪೂಜಾ ಕಾರ್ಯ ಆರಂಭವಾಗುತ್ತದೆ. ವ್ರತ ಕೈಗೊಂಡು ಮಾಲೆ ಹಾಕಿದ ಭಕ್ತರು ನವೆಂಬರ್ನಿಂದ ಜನವರಿವರೆಗೆ ವಾರ್ಷಿಕ ಪ್ರವೇಶದ ಸಮಯದಲ್ಲಿ ದರ್ಶನವನ್ನು ಮಾಡುತ್ತಾರೆ. ಜನವರಿ 14ರ ಮಕರ ಸಂಕ್ರಾಂತಿ, ಏಪ್ರಿಲ್ 14ರ ವಿಷು ಸಂಕ್ರಾಂತಿ ಹಾಗೂ ಪ್ರತಿ ಮಲಯಾಳಂ ಮಾಸದ ಮೊದಲ ಐದು ದಿನ ಅಯ್ಯಪ್ಪನ ದರ್ಶನವನ್ನು ಮಾಡಬಹುದು.
ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವುದರ ಹಿಂದಿನ ಮಹತ್ವವೇನು ಗೊತ್ತಾ?
ಏಳು ಮಲೆಗಳನ್ನು ಸುತ್ತಿ, ಹದಿನೆಂಟು ಮೆಟ್ಟಿಲುಗಳನ್ನು ಹತ್ತಿ ಅಯ್ಯಪ್ಪನ ದರ್ಶನ ಪಡೆಯಬೇಕೆಂದರೆ ಮಾಲಾಧಾರಣೆಯನ್ನು ಮಾಡಬೇಕು. ಮಾಲಾಧಾರಣೆಯನ್ನು ಮಾಡುವವರು 41 ದಿನಗಳ ವ್ರತಾಚರಣೆ ಮಾಡುವುದು ಕಡ್ಡಾಯ. ಸನಾತನ ಧರ್ಮದ ಪ್ರಕಾರ ಮನುಷ್ಯನು ಭಗವಂತನಲ್ಲಿ ಐಕ್ಯವಾಗಲು ರಾಜ ಯೋಗ, ಭಕ್ತಿ ಯೋಗ, ಕರ್ಮ ಯೋಗ, ಜ್ಞಾನ ಯೋಗ ಎಂಬ ಮಾರ್ಗಗಳಿವೆ. ಅಯ್ಯಪ್ಪ ವ್ರತ ಮಾಡುವವರು ಭಕ್ತಿಯೋಗದ ಮೂಲಕ ದೈವ ಸ್ವರೂಪದ ಅನುಭವವನ್ನು ಪಡೆಯುತ್ತಾರೆ ಎನ್ನಲಾಗುತ್ತದೆ.
ಅಯ್ಯಪ್ಪ ವ್ರತಾಚರಣೆಯ ನಿಯಮಗಳು
* ಶಬರಿಮಲೆಗೆ ಹೋಗುವ ಮುನ್ನ 41 ದಿನ ಕಠಿಣ ವ್ರತ ಪಾಲಿಸಬೇಕು.
* ಮುಂಜಾನೆ ಎದ್ದು ತಣ್ಣೀರಿನಲ್ಲಿ ಮಿಂದು ಮಡಿಯನ್ನುಟ್ಟು ಅಯ್ಯಪ್ಪನಾಮ ಜಪಿಸುತ್ತಾ ಅಯ್ಯಪ್ಪನಿಗೆ ಪೂಜೆ ಸಲ್ಲಿಸಬೇಕು,ಅಯ್ಯಪ್ಪನಿಗೆ ಪ್ರಾತಃಪೂಜೆ ಮತ್ತು ಸಂಧ್ಯಾಪೂಜೆ ಮಾಡಿ ನೈವೇದ್ಯ ಅರ್ಪಿಸಬೇಕು.
*ಅಯ್ಯಪ್ಪ ಮಾಲೆ ಧರಿಸಿದವರು ದಿನ 24 ಗಂಟೆಯೂ ಅಯ್ಯಪ್ಪನ ಜಪ ಮಾಡಬೇಕು. ಈ ಸಂದರ್ಭದಲ್ಲಿ ಯಾವುದೇ ಕೆಟ್ಟ ಯೋಚನೆ ಮಾಡಬಾರದು
* ಸ್ವತಃ ಅಥವಾ ಅಯ್ಯಪ್ಪ ಮಾಲಾಧಾರಿ ತಯಾರಿಸಿದ ಆಹಾರ ಮಾತ್ರ ಸೇವಿಸಬೇಕು, ಅದು ಒಂದು ಹೊತ್ತು ಮಾತ್ರ ಊಟ ಮಾಡಬೇಕು. ಬೆಳಗ್ಗೆ ಹಾಗೂ ಸಾಯಂಕಾಲ ಅಲ್ಪಾಹಾರ ಸೇವಿಸಬೇಕು.
*ವೃತಾವಧಿಯಲ್ಲಿ ಮಾಂಸಾಹಾರ ಸೇವನೆ, ಮದ್ಯಪಾನ, ತಂಬಾಕು ಸೇವನೆ ಮಾಡಬಾರದು.
* ತಲೆಕೂದಲು ಹಾಗೂ ಉಗುರುಗಳನ್ನು ಕತ್ತರಿಸಬಾರದು
* ದಿನದಲ್ಲಿ ಎರಡು ಬಾರಿ ಸ್ನಾನ ಮಾಡಿ, ಸ್ಥಳೀಯ ದೇವಸ್ಥಾನಕ್ಕೆ ಹೋಗಿ ಬರಬೇಕು.
ಮನೋ ಕಾಮನೆಗಳ ಈಡೇರಿಕೆಗೆ ಆಲದ ಮರದ ಪೂಜೆಯೊಂದೇ ಉತ್ತಮ ಮಾರ್ಗ...
* ಕಪ್ಪು ಬಣ್ಣದ ಅಥವಾ ಕಾವಿ ಬಟ್ಟೆ ಧರಿಸಬೇಕು.
* ವ್ರತಧಾರಿಯು ತುಳಸಿ ಮಾಲೆ ಮತ್ತು ರುದ್ರಾಕ್ಷಿಯನ್ನು ಧರಿಸಿರಬೇಕು
* ಮನೆಯಿಂದ ದೂರವಿದ್ದು ಪ್ರತ್ಯೇಕವಾಗಿ ಅಥವಾ ದೇವಸ್ಥಾನದ ಬಳಿ ವಾಸಿಸಬೇಕು.
* ಹಿರಿಯರನ್ನಾಗಲಿ, ಕಿರಿಯರನ್ನಾಗಲಿ ಇತರರನ್ನು ಕೂಡ ‘ಅಯ್ಯಪ್ಪ’ ಎಂದೇ ಸಂಬೋಧಿಸಬೇಕು.
* ಹೆಂಗಸರನ್ನು, ಹೆಂಡತಿಯನ್ನು ‘ಮಾತಾ / ಅಮ್ಮ’ ಎಂದು ಕರೆಯಬೇಕು
* ಚಪ್ಪಲಿಯನ್ನು ಧರಿಸಬಾರದು, ಕಾಲುನಡಿಗೆಯಲ್ಲಿ ತೆರಳಬೇಕು
* ಅಯ್ಯಪ್ಪ ಮಾಲೆ ಧರಿಸಿದವರೆಲ್ಲರಿಗೂ ವಯೋಮಾನದ ಭೇದವಿಲ್ಲದೆ ಕಾಲಿಗೆ ನಮಸ್ಕರಿಸಬೇಕು
*ಅಯ್ಯಪ್ಪ ದೀಕ್ಷೆ ಪಡೆದವರು ನೆಲದ ಮೇಲೆ ಮಲಗಬೇಕು.
ಕಾರ್ತಿಕ ಮಾಸದ ಆರಾಧನೆಯಿಂದ ನಿಮ್ಮ ಭವಿಷ್ಯವೇ ಬದಲಾಗುವುದು..!
ಅಯ್ಯಪ್ಪ ವ್ರತ ನಿಯಮದ ಪ್ರಾಮುಖ್ಯತೆ
- ಮಾಂಸಾಹಾರ, ಮದ್ಯಪಾನ, ಧೂಮಪಾನವನ್ನು ತ್ಯಜಿಸುವುದರಿಂದ ದೇಹದ ಆರೋಗ್ಯ ವೃದ್ಧಿಯಾಗುವುದು. ಜೊತೆಗೆ ಒಳ್ಳೆಯ ಚಿಂತನೆಗಳು ನಮ್ಮ ಆರೋಗ್ಯವನ್ನು ಹೆಚ್ಚಿಸಲು ಸಹಕಾರಿ.
- ಕೇಶಮುಂಡನ ಮಾಡದಿರುವುದು, ಉಗುರು ಕತ್ತರಿಸದಿರುವುದು ನಮ್ಮನ್ನು ಬಾಹ್ಯ ಸೌಂದರ್ಯ ಹಾಗೂ ಲೌಕಿಕ ಆಕರ್ಷಣೆಯಿಂದ ದೂರವಿಡುತ್ತದೆ.
- ವೃತಧಾರಿಗಳು ಧರಿಸುವಂತಹ ಕಪ್ಪು ಬಟ್ಟೆಯು ಎಲ್ಲಾ ಲೌಕಿಕ ಸುಖ, ಆಕರ್ಷಣೆಗಳನ್ನು ಬಿಟ್ಟು ದೇವರಿಗೆ ಶರಣಾಗಿದ್ದೇವೆ ಎನ್ನುವುದರ ಸಂಕೇತವಾಗಿದೆ. ಅಲ್ಲದೇ ಅಯ್ಯಪ್ಪನ ಮುಂದೆ ಎಲ್ಲರೂ ಸಮಾನರು ಎಂಬ ಅರ್ಥವನ್ನು ನೀಡುತ್ತದೆ.
- ಅಯ್ಯಪ್ಪ ಭಕ್ತರು 41 ದಿನ ಬ್ರಹ್ಮಚರ್ಯವನ್ನು ಪಾಲಿಸುವುದರಿಂದ ಕಾಮ, ಕ್ರೋಧ, ಮೋಹದಿಂದ ದೂರವಿದ್ದರೆ ಮನಸ್ಸು ಹಾಗೂ ದೇಹ ಶುದ್ಧವಾಗುವುದು.