ಆ್ಯಪ್ನಗರ

25ರ ಬಳಿಕ ಹೊಸದಿಲ್ಲಿಗೆ ಎಸ್‌.ಎಂ.ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಈ ತಿಂಗಳ 25 ರ ಬಳಿಕ ಹೊಸದಿಲ್ಲಿಗೆ ತೆರಳಲಿದ್ದಾರೆ.

ವಿಕ ಸುದ್ದಿಲೋಕ 20 Mar 2017, 7:50 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಈ ತಿಂಗಳ 25 ರ ಬಳಿಕ ಹೊಸದಿಲ್ಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆಗಳಿವೆ.

ಈಗಾಗಲೇ ಕಾಂಗ್ರೆಸ್‌ ತೊರೆದಿರುವ ಅವರು ಇದೇ 15 ರಂದು ಬಿಜೆಪಿಗೆ ಸೇರ್ಪಡೆಗೊಳ್ಳಬೇಕಿತ್ತು. ಆದರೆ ಸಹೋದರಿ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು.

ಸಹೋದರಿಯ 11ನೇ ದಿನದ ಕಾರ್ಯದ ಬಳಿಕ ಅವರು ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಆದಷ್ಟು ಬೇಗ ಕೃಷ್ಣ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಳಸಿಕೊಳ್ಳಬೇಕೆಂಬುದು ಬಿಜೆಪಿ ಬಯಕೆಯಾಗಿದೆ.

Vijaya Karnataka Web s m krishna going to delhi after 25th
25ರ ಬಳಿಕ ಹೊಸದಿಲ್ಲಿಗೆ ಎಸ್‌.ಎಂ.ಕೃಷ್ಣ


ಹೀಗಾಗಿ ಈ ತಿಂಗಳೊಳಗೆ ಕೃಷ್ಣ ಅವರು ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ