ಆ್ಯಪ್ನಗರ

ಕೃಷ್ಣ ರಾಜೀನಾಮೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ: ಪೂಜಾರಿ

ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವುದು ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಬಿ.ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ವಿಕ ಸುದ್ದಿಲೋಕ 30 Jan 2017, 3:00 pm
ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವುದು ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
Vijaya Karnataka Web s m krishna resignation big loss to congress
ಕೃಷ್ಣ ರಾಜೀನಾಮೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ: ಪೂಜಾರಿ


ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ದಿ ಕೃಷ್ಣ ಅವರಂಥ ನಾಯಕರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಲ್ಲ. ಕೃಷ್ಣ ಅವರ ರಾಜಕೀಯ ನಡೆ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕಾಂಗ್ರೆಸ್ ಗೆ ದೊಡ್ಡ ಗಂಡಾಂತರ ತಂದಿದೆ. ಅವರನ್ನು ಪಕ್ಷ ಕಡೆಗಣಿಸಿರುವುದು ಸತ್ಯ. ಅದರೆ ಅವರ ಪಕ್ಷ ಬಿಟ್ಟು ಹೋಗುವ ನಿರ್ಧಾರ ಸರಿಯಲ್ಲ. ನಾವೆಲ್ಲ ಸೇರಿ ಪಕ್ಷದಲ್ಲಿ ಇದ್ದುಕೊಂಡೇ ಅನ್ಯಾಯದ ವಿರುದ್ಧ ಹೋರಾಡಬೇಕಿತ್ತು. ಇನ್ನೂ ಕಾಲ ಮಿಂಚಿಲ್ಲ. ಸೋನಿಯಾ ಗಾಂಧಿ ಬಳಿ ಹೋಗಿ ತಪ್ಪಾಗಿದೆ ಎಂದು ಕೇಳಿಕೊಂಡು ಮತ್ತೆ ಪಕ್ಷಕ್ಕೆ ಬನ್ನಿ. ಯಾರೆಲ್ಲ ಪಕ್ಷಕ್ಕೆ ದ್ರೋಹ ಬಗೆದಿದ್ದಾರೋ ಅವರ ವಿರುದ್ಧ ಹೋರಾಡೋಣ ಎಂದು ಹೇಳಿದರು.

ರಾಜ್ಯದಲ್ಲಿ ಜೆಡಿಎಸ್ ಸರಕಾರ

ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಸರಕಾರ ಅಲ್ಲ, ಇದು ಜೆಡಿಎಸ್ ಸರಕಾರ ಎಂದು ಛೇಡಿಸಿದ ಪೂಜಾರಿ, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶನಿ ಇದ್ದಂತೆ. ಅವರು ಇಲ್ಲಿಂದ ತೊಲಗದೆ ಈ ಪಕ್ಷಕ್ಕೆ ಉಳಿಗಾಲ ಇಲ್ಲ. ನಾವೆಲ್ಲ ಹಿರಿಯರು ಪಕ್ಷದಲ್ಲೇ ಇದ್ದು ಮುಖ್ಯಮಂತ್ರಿ ಅವರ ದುರಾಹಂಕಾರಕ್ಕೆ ಕಡಿವಾಣ ಹಾಕುವ ಕೆಲಸ ಮಾಡೋಣ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ