ಆ್ಯಪ್ನಗರ

ಭಾರತಕ್ಕೆ ಆಘಾತ; ಗಾಯಾಳು ಭುವಿ ಸೇವೆಯಿಂದ ಟೀಮ್ ಇಂಡಿಯಾ ವಂಚಿತ!

ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ದ ನಡೆಯುತ್ತಿರುವ ಪಂದ್ಯದಲ್ಲಿ ಗಾಯದ ಸಮಸ್ಯೆಗೊಳಗಾಗಿರುವ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ. ಇದರಿಂದ ಆಘಾತಕ್ಕೊಳಗಾಗಿದೆ.

Vijaya Karnataka Web 16 Jun 2019, 9:26 pm
ಮ್ಯಾಂಚೆಸ್ಟರ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಹೈ ವೋಲ್ಟೇಜ್ ಪಂದ್ಯದ ನಡುವೆ ಟೀಮ್ ಇಂಡಿಯಾ ಭಾರಿ ಆಘಾತಕ್ಕೊಳಗಾಗಿದೆ.
Vijaya Karnataka Web bhuvneshwar-kumar


ಭಾರತದ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಸ್ನಾಯು ಸೆಳೆತಕ್ಕೊಳಗಾದ ಪರಿಣಾಮ ಟೀಮ್ ಇಂಡಿಯಾ ಸೇವೆಯಿಂದ ವಂಚಿತವಾಗಿದೆ.

ಪಾಕ್ ಇನ್ನಿಂಗ್ಸ್‌ನ ಐದನೇ ಓವರ್‌ನಲ್ಲಿ ಘಟನೆ ನಡೆದಿತ್ತು. ತಮ್ಮ ಮೂರನೇ ಓವರ್‌ನ ನಾಲ್ಕನೇ ಎಸೆತದ ವೇಳೆ ಭುವಿ ಗಾಯದ ಸಮಸ್ಯೆಕೊಳಗಾದರು. ತಕ್ಷಣವೇ ಫಿಸಿಯೋ ಸಂಪರ್ಕಿಸಿ ಮೈದಾನ ತೊರೆದರು.

ನಿಖರ ದಾಳಿ ಸಂಘಟಿಸಿದ ಭುವಿ ಎಂಟು ರನ್‌ಗಳನ್ನಷ್ಟೇ ಬಿಟ್ಟು ಕೊಟ್ಟಿದ್ದರು. ಬಳಿಕ ಬುಮ್ರಾ ಓವರ್ ಪೂರ್ಣಗೊಳಿಸಲು ದಾಳಿಗಳಿದ ವಿಜಯ್ ಶಂಕರ್, ತಮ್ಮ ಚೊಚ್ಚಲ ವಿಶ್ವಕಪ್‌ನ ಪ್ರಥಮ ಎಸೆತದಲ್ಲೇ ವಿಕೆಟ್ ಪಡೆದು ಗಮನ ಸೆಳೆದರು.

ತದಾ ಬೆನ್ನಲ್ಲೇ ಭುವಿ ಈ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ ಎಂಬ ವರದಿಯು ಟೀಮ್ ಇಂಡಿಯಾ ಡ್ರೆಸ್ಸಿಂಗ್ ಕೊಠಡಿಯಿಂದ ಬಂದಿದೆ. ಇದರೊಂದಿಗೆ ಭಾರತ ಆಘಾತ ಎದುರಿಸುವಂತಾಗಿದೆ.

ಈಗಾಗಲೇ ಗಾಯದ ಸಮಸ್ಯೆಯಿಂದ ಶಿಖರ್ ಧವನ್ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ. ಭುವಿ ಮುಂದಿನ ಪಂದ್ಯಗಳಿಗೆ ಲಭ್ಯವಾಗುವರೇ ಎಂಬುದರ ಬಗ್ಗೆ ನಿಖರ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌