ಆ್ಯಪ್ನಗರ

ಬುಮ್ರಾ, ಭುವಿ, ಶಮಿ ಮ್ಯಾಚ್ ವಿನ್ನರ್‌ಗಳು: ಪ್ರಸಾದ್

ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಅತೀವ ಕೌಶಲ್ಯವನ್ನು ಹೊಂದಿದ್ದು, ಏಕಾಂಗಿಯಾಗಿ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 22 May 2019, 12:39 pm
ಹೊಸದಿಲ್ಲಿ: 1999ರ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೇವಲ 27 ರನ್ ತೆತ್ತು ಐದು ವಿಕೆಟುಗಳನ್ನು ಕಬಳಿಸುವ ಮೂಲಕ ಭಾರತಕ್ಕೆ ಸ್ಮರಣೀಯ ಗೆಲುವನ್ನು ಒದಗಿಸಿಕೊಟ್ಟಿರುವ ಕರ್ನಾಟಕದ ಹೆಮ್ಮೆಯ ಮಾಜಿ ವೇಗಿ ವೆಂಕಟೇಶ್ ಪ್ರಸಾದ್, ಟೀಮ್ ಇಂಡಿಯಾದ ತ್ರಿವಳಿ ವೇಗದ ಬೌಲರ್‌ಗಳ ಕುರಿತಾಗಿ ಚರ್ಚಿಸಿದ್ದಾರೆ.
Vijaya Karnataka Web bhuvi-bumrah-shami


ಅತೀವ ಕೌಶಲ್ಯವನ್ನು ಹೊಂದಿರುವ ಜಸ್ಪ್ರೀತ್ ಬುಮ್ರಾ, ಬುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಅವರನ್ನೊಳಗೊಂಡ ವೇಗದ ಪಡೆಯು ಮ್ಯಾಚ್ ವಿನ್ನರ್‌‌ಗಳಾಗಿದ್ದು, ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಡುವ ಸಾಮರ್ಥ್ಯವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಎಲ್ಲ ಮೂವರು ಬೌಲರ್‌ಗಳು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಂಡು ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅಲ್ಲದೆ ತಮ್ಮ ಶಕ್ತಿ ಹಾಗೂ ವೀಕೆನೆಸ್ ಯಾವುದು ಎಂಬುದನ್ನು ಚೆನ್ನಾಗಿ ಗ್ರಹಿಸಿದ್ದಾರೆ ಎಂದು 2007ರಿಂದ 2009ರ ಅವಧಿಯಲ್ಲಿ ಭಾರತದ ಬೌಲಿಂಗ್ ಕೋಚ್ ಆಗಿಯೂ ಸೇವೆ ಸಲ್ಲಿಸಿರುವ ಪ್ರಸಾದ್ ತಿಳಿಸಿದರು.

140ರ ವೇಗದ ಅಸುಪಾಸಿನಲ್ಲಿ ಈ ಮೂವರು ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇನ್ನು ಆಸಕ್ತಿದಾಯಕ ಸಂಗತಿಯೆಂದರೆ ವೇಗದಲ್ಲಿ ಯಾವುದೇ ಕೊರತೆಯಾಗದಂತೆ ಸ್ವಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದರು.

ಬುಮ್ರಾ ಟೀಮ್ ಇಂಡಿಯಾದ ಅತಿ ದೊಡ್ಡ ಆಸ್ತಿಯಾಗಿದ್ದು, ಗಿಫ್ಟ್‌ಡ್ ಬೌಲರ್ ಎಂದು ಶ್ಲಾಘಿಸಿದರು. ಇನ್ನೊಂದೆಡೆ ಭುವಿ ತಮ್ಮ ಕರ್ತವ್ಯ ನಿರ್ವಹಿಸುವುದರಲ್ಲಿ ಸದಾ ಬದ್ಧರಾಗಿದ್ದಾರೆ. ಹಾಗೆಯೇ ಶಮಿ ಅವರ ದೊಡ್ಡ ಶಕ್ತಿ ಔಟ್ ಸ್ವಿಂಗರ್ ದಾಳಿಯಾಗಿದೆ ಎಂದು ಉಲ್ಲೇಖಿಸಿದರು.

ಈ ನಡುವೆ ಐಪಿಎಲ್‌ಗಿಂತಲೂ ವಿಶ್ವಕಪ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌