ಆ್ಯಪ್ನಗರ

ಭಾರತವೇ ಬೆಸ್ಟ್, ಸೆಮೀಸ್ ಪ್ರವೇಶ ಖಚಿತ: ಗಂಗೂಲಿ

ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಭಾರತ ಇದುವರೆಗೆ ತನ್ನ ಶ್ರೇಷ್ಠ ಪ್ರದರ್ಶನವನ್ನೇ ನೀಡಿದ್ದು, ನಿಸ್ಸಂಶವಾಗಿಯೂ ಸೆಮಿಫೈನಲ್ ಪ್ರವೇಶಿಸಲಿದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 19 Jun 2019, 9:01 pm
ಕೋಲ್ಕತಾ: ಪ್ರಸಕ್ತ ಸಾಗುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಗಾಯದ ಸಮಸ್ಯೆಯೂ ನಡುವೆಯೂ ಟೀಮ್ ಇಂಡಿಯಾ ತನ್ನ ಶ್ರೇಷ್ಠ ಪ್ರದರ್ಶನವನ್ನೇ ಹೊರಹೊಮ್ಮಿದೆ. ಅಲ್ಲದೆ ಸೆಮಿಫೈನಲ್ ಪ್ರವೇಶ ಖಚಿತ ಎಂದು ಭಾರತದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web team-india-03


ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಶಿಖರ್ ಧವನ್ ವಿಶ್ವಕಪ್‌ನಿಂದಲೇ ಹೊರನಡೆದಿದ್ದಾರೆ. ಅತ್ತ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೊಳಗಾಗಿರುವ ಭುವನೇಶ್ವರ್ ಕುಮಾರ್ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆ.

ಗಾಯದ ಸಮಸ್ಯೆಯ ನಡುವೆಯೂ ಟೀಮ್ ಇಂಡಿಯಾ ತನ್ನ ಶ್ರೇಷ್ಠ ಪ್ರದರ್ಶನವನ್ನೇ ಹೊರಹೊಮ್ಮಿದ್ದಾರೆ. ಅಲ್ಲದೆ ಭಾರತ ಸೆಮಿಫೈನಲ್ ಪ್ರವೇಶಿಸಲಿದೆ. ಅಲ್ಲಿಂದ ಬಳಿಕ ನೋಡೋಣ ಎಂದು ದಾದಾ ನುಡಿದರು.

ಧವನ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅತ್ಯುತ್ತಮ ಇನ್ನಿಂಗ್ಸ್ ಕಟ್ಟಿದರು. ಹಾಗೆಯೇ ಭುವನೇಶ್ವರ್ ಕುಮಾರ್ ಅಲಭ್ಯತೆಯಲ್ಲಿ ವಿಜಯ್ ಶಂಕರ್ ನಿಖರ ಬೌಲಿಂಗ್ ಸಂಘಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌