ಆ್ಯಪ್ನಗರ

2011ರಲ್ಲಿ ಸಚಿನ್, 2019ರಲ್ಲಿ ಧೋನಿ ಸ್ಫೂರ್ತಿ: ಶಾಸ್ತ್ರಿ

2011ರಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್‌ಗಾಗಿ ವಿಶ್ವಕಪ್ ಗೆದ್ದ ರೀತಿಯಲ್ಲಿ ಈ ಬಾರಿ ಮಹೇಂದ್ರ ಸಿಂಗ್ ಧೋನಿಗಾಗಿ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಬಹುದೇ ಎಂಬುದನ್ನು ಕಾದು ನೋಡಬೇಕಿದೆ.

Vijaya Karnataka Web 22 May 2019, 11:19 am
ಮುಂಬಯಿ: 2011ನೇ ಇಸವಿಯಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ರೀತಿಯಲ್ಲೇ 2019ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾಗೆ ಸ್ಫೂರ್ತಿಯಾಗಿದ್ದಾರೆ ಎಂದು ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web ms-dhoni-04


ಮುಂಬರುವ ಐಸಿಸಿ 2019 ಏಕದಿನ ವಿಶ್ವಕಪ್‌ಗಾಗಿ ಭಾರತದ ಇಂಗ್ಲೆಂಡ್ ಪರ್ಯಟನೆಗೂ ಮುಂಚಿತವಾಗಿ ಶಾಸ್ತ್ರಿ, ಧೋನಿ ಕೊಡುಗೆಗಳನ್ನು ಸ್ಮರಿಸಿದ್ದಾರೆ.

2007ರ ಚೊಚ್ಚಲ ಟ್ವೆಂಟಿ-20 ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ಜಯಿಸಿರುವ ಮಹೇಂದ್ರ ಸಿಂಗ್ ಧೋನಿ, ಈಗಾಗಲೇ ತಮ್ಮ ಕ್ರಿಕೆಟ್ ಕೆರಿಯರ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ.

ಹಾಗೆಯೇ 37ರ ಹರೆಯದ ಧೋನಿ ಪಾಲಿಗೆ ಇದು ಕೊನೆಯ ವಿಶ್ವಕಪ್ ಆಗಿದೆ. ಇದರಂತೆ ಶ್ರೇಷ್ಠ ಬೀಳ್ಕೊಡುಗೆ ನೀಡಲು ಟೀಮ್ ಇಂಡಿಯಾ ಸಜ್ಜಾಗುತ್ತಿದೆ.


ಎಂದಿನಂತೆ ಈ ವಿಶ್ವಕಪ್‌ನಲ್ಲೂ ಧೋನಿ ಮಹತ್ತರ ಪಾತ್ರವನ್ನು ನಿಭಾಯಿಸಲಿದ್ದಾರೆ. ಈ ಪ್ರಕಾರದಲ್ಲಿ ಕ್ಷಣ ಮಾತ್ರದಲ್ಲಿ ಪಂದ್ಯದ ಗತಿಯನ್ನು ಬದಲಾಯಿಬಲ್ಲ ಧೋನಿಗಿಂತ ಉತ್ತಮರೂ ಯಾರೂ ಇಲ್ಲ ಎಂದು ಶಾಸ್ತ್ರಿ ಉಲ್ಲೇಖಿಸಿದ್ದಾರೆ.

ಹಾಗೊಂದು ವೇಳೆ 2011ರಲ್ಲಿ ಸಚಿನ್‌ಗಾಗಿ ವಿಶ್ವಕಪ್ ಗೆದ್ದ ರೀತಿಯಲ್ಲಿ ಈ ಬಾರಿ ಧೋನಿಗಾಗಿ ವಿಶ್ವಕಪ್ ಗೆಲ್ಲುವರೇ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌