ಆ್ಯಪ್ನಗರ

ಧೋನಿ ಲೆಜೆಂಡ್; ಪುನರುಚ್ಛಿಸಿದ ಕೊಹ್ಲಿ

ಮಹೇಂದ್ರ ಸಿಂಗ್ ಧೋನಿಗೆ ಯಾವಾಗ ಹೇಗೆ ಆಡಬೇಕೆಂಬುದು ಚೆನ್ನಾಗಿ ತಿಳಿದಿದೆ. ಅಲ್ಲದೆ ಭಾರತಕ್ಕಾಗಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ .

Vijaya Karnataka Web 28 Jun 2019, 3:38 pm
ಮ್ಯಾಂಚೆಸ್ಟರ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ನಿಧಾನಗತಿಯ ಆಟದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಧೋನಿ ಆಟವನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೆಂಬಲಿಸಿದ್ದಾರೆ.
Vijaya Karnataka Web kohli-dhoni


ಅಫಫಾನಿಸ್ತಾನ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ಬಳಿಕ ವ್ಯಾಪಕ ವಿಮರ್ಶೆಗಳು ವ್ಯಕ್ತವಾಗಿದ್ದವು. ತದಾ ಬಳಿಕ ವೆಸ್ಟ್‌ಇಂಡೀಸ್ ವಿರುದ್ಧ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಜೀವದಾನದ ಲಾಭ ಪಡೆದ ಧೋನಿ ಅಂತಿಮ ಓವರ್‌ನಲ್ಲಿ ಎರಡು ಸಿಕ್ಸರ್ ಹಾಗೂ ಬೌಂಡರಿ ಸಿಡಿಸುವ ಮೂಲಕ ಗಮನ ಸೆಳೆದಿದ್ದರು. ಈ ಮೂಲಕ ಅಜೇಯ 56 ರನ್ ಗಳಿಸಿದ್ದರು.

ಧೋನಿಗೆ ಏನು ಮಾಡಬೇಕೆಂಬುದು ಸ್ಪಷ್ಟವಾಗಿ ತಿಳಿದಿದೆ. ಒಮ್ಮೆ ವಿಫಲವಾದರೆ ಎಲ್ಲರೂ ಅವರು ವಿರುದ್ಧ ಮಾತನಾಡಲು ಆರಂಭಿಸುತ್ತಾರೆ. ನಾವೆಲ್ಲರೂ ಯಾವತ್ತೂ ಅವರನ್ನು ಬೆಂಬಲಿಸುತ್ತೇವೆ. ತಂಡಕ್ಕಾಗಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಹೆಚ್ಚುವರಿ 15-20 ರನ್ ಗಳಿಸುವುದು ಹೇಗೆಂಬುದು ಧೋನಿಗೆ ಚೆನ್ನಾಗಿ ತಿಳಿದಿದೆ. ಇದುವೇ ಧೋನಿ ಬಗೆಗಿನ ಅತ್ಯುತ್ತಮ ಅಂಶವಾಗಿದೆ. ಧೋನಿ ಅನುಭವದಿಂದ 10ರಲ್ಲಿ ಎಂಟು ಬಾರಿ ನಮಗಾಗಿ ಒಳಿತನ್ನು ಮಾಡುತ್ತಾರೆ ಎಂದರು.

ಪಂದ್ಯವನ್ನು ಧೋನಿ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಸಹ ಆಟಗಾರರ ಬಗ್ಗೆ ಫೀಡ್‌ಬ್ಯಾಕ್ ನೀಡುತ್ತಾರೆ. ಧೋನಿ ಕ್ರಿಕೆಟ್‌ನ ಲೆಜೆಂಡ್ ಎಂದು ಶ್ಲಾಘಿಸಿದರು.

ಅದೇ ಹೊತ್ತಿಗೆ ಏಕದಿನದಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತನ್ನ ಶ್ರೇಯಾಂಕಕ್ಕೆ ತಕ್ಕ ಪ್ರದರ್ಶನ ನೀಡಿರುವುದಕ್ಕೆ ಸಂತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌