ಮುಂಬಯಿ: ಐಸಿಸಿ 2019 ಏಕದಿನ ವಿಶ್ವಕಪ್ ಸಾಗುತ್ತಿರುವಂತೆಯೇ ಟೀಮ್ ಇಂಡಿಯಾ ಎಡಗೈ ಆಕ್ರಮಣಕಾರಿ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಗಾಯದ ಸಮಸ್ಯೆಗೆ ತುತ್ತಾಗಿರುವಂತೆಯೇ ಉದಯೋನ್ಮುಖ ಎಡಗೈ ಬ್ಯಾಟ್ಸ್ಮನ್ ರಿಷಬ್ ಪಂತ್ ಇಂಗ್ಲೆಂಡ್ ಪ್ರಯಾಣ ಬೆಳೆಸುವುದು ಬಹುತೇಕ ಖಚಿತವೆನಿಸಿದೆ.
ಈ ಬಗ್ಗೆ ಬಿಸಿಸಿಐ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪ್ಯಾಮ್ ಕಮಿನ್ಸ್ ದಾಳಿಯು ಬಡಿದು ಧವನ್ ಹೆಬ್ಬರಳಿಗೆ ಗಾಯ ಮಾಡಿಕೊಂಡಿದ್ದರು.
ಗಾಯದ ನಡುವೆಯೂ ನೋವಿನಲ್ಲೂ ಅಮೋಘ ಇನ್ನಿಂಗ್ಸ್ ಕಟ್ಟಿದ ಧವನ್ ಅಮೋಘ ಶತಕ ಬಾರಿಸಿ ಟೀಮ್ ಇಂಡಿಯಾದ 36 ರನ್ಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಮೂಲಕ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿದ್ದರು.
ಕನಿಷ್ಠ ಮೂರು ವಾರಗಳ ವಿಶ್ರಾಂತಿಯನ್ನು ಧವನ್ಗೆ ಸೂಚಿಸಲಾಗುವುದು. ಹಾಗಾಗಿ ಲೀಗ್ ಹಂತದ ಪಂದ್ಯಗಳಿಗೆ ಲಭ್ಯರಾಗುವುದು ಕಠಿಣವೆನಸಿದೆ. ವೈದ್ಯಕೀಯ ಪರೀಕ್ಷೆಯ ವರದಿಯ ಬಳಿಕವಷ್ಟೇ ನಾಕೌಟ್ ಪಂದ್ಯಗಳಿಗೆ ಲಭ್ಯವಾಗುವರೆೇ ಎಂಬುದರ ಬಗ್ಗೆ ತಿಳಿದು ಬರಲಿದೆ.
ಇವೆಲ್ಲದರ ನಡುವೆ ಟೀಮ್ ಇಂಡಿಯಾ ವ್ಯವಸ್ಥಾಪಕ ಮಂಡಳಿಯು ರಿಷಬ್ ಪಂತ್ರನ್ನು ಇಂಗ್ಲೆಂಡ್ಗೆ ರವಾನಿಸುವಂತೆ ಬೇಡಿಕೆ ಮುಂದಿಡುವ ಸಾಧ್ಯತೆಯಿದೆ ಎಂಬುದು ತಿಳಿದು ಬಂದಿದೆ.
ಈ ಹಿಂದೆ 15 ಸದಸ್ಯ ಬಳಗದ ತಂಡವನ್ನು ಪ್ರಕಟಿಸಿದಾಗ ಪಂತ್ರನ್ನು ಕೈಬಿಡಲಾಗಿತ್ತು. 21ರ ಹರೆಯದ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಮೋಘ ನಿರ್ವಹಣೆಯನ್ನು ನೀಡಿದ್ದರು.
ಈ ಬಗ್ಗೆ ಬಿಸಿಸಿಐ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪ್ಯಾಮ್ ಕಮಿನ್ಸ್ ದಾಳಿಯು ಬಡಿದು ಧವನ್ ಹೆಬ್ಬರಳಿಗೆ ಗಾಯ ಮಾಡಿಕೊಂಡಿದ್ದರು.
ಗಾಯದ ನಡುವೆಯೂ ನೋವಿನಲ್ಲೂ ಅಮೋಘ ಇನ್ನಿಂಗ್ಸ್ ಕಟ್ಟಿದ ಧವನ್ ಅಮೋಘ ಶತಕ ಬಾರಿಸಿ ಟೀಮ್ ಇಂಡಿಯಾದ 36 ರನ್ಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಮೂಲಕ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿದ್ದರು.
ಕನಿಷ್ಠ ಮೂರು ವಾರಗಳ ವಿಶ್ರಾಂತಿಯನ್ನು ಧವನ್ಗೆ ಸೂಚಿಸಲಾಗುವುದು. ಹಾಗಾಗಿ ಲೀಗ್ ಹಂತದ ಪಂದ್ಯಗಳಿಗೆ ಲಭ್ಯರಾಗುವುದು ಕಠಿಣವೆನಸಿದೆ. ವೈದ್ಯಕೀಯ ಪರೀಕ್ಷೆಯ ವರದಿಯ ಬಳಿಕವಷ್ಟೇ ನಾಕೌಟ್ ಪಂದ್ಯಗಳಿಗೆ ಲಭ್ಯವಾಗುವರೆೇ ಎಂಬುದರ ಬಗ್ಗೆ ತಿಳಿದು ಬರಲಿದೆ.
ಇವೆಲ್ಲದರ ನಡುವೆ ಟೀಮ್ ಇಂಡಿಯಾ ವ್ಯವಸ್ಥಾಪಕ ಮಂಡಳಿಯು ರಿಷಬ್ ಪಂತ್ರನ್ನು ಇಂಗ್ಲೆಂಡ್ಗೆ ರವಾನಿಸುವಂತೆ ಬೇಡಿಕೆ ಮುಂದಿಡುವ ಸಾಧ್ಯತೆಯಿದೆ ಎಂಬುದು ತಿಳಿದು ಬಂದಿದೆ.
ಈ ಹಿಂದೆ 15 ಸದಸ್ಯ ಬಳಗದ ತಂಡವನ್ನು ಪ್ರಕಟಿಸಿದಾಗ ಪಂತ್ರನ್ನು ಕೈಬಿಡಲಾಗಿತ್ತು. 21ರ ಹರೆಯದ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಮೋಘ ನಿರ್ವಹಣೆಯನ್ನು ನೀಡಿದ್ದರು.