ಆ್ಯಪ್ನಗರ

ವಿಶ್ವಕಪ್ ಗೆಲುವಿನ ಸ್ಮರಣೀಯ ಕ್ಷಣವನ್ನು ಹಂಚಿಕೊಂಡ ಗವಾಸ್ಕರ್

1983ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಟ್ರೋಫಿ ಗೆದ್ದಾಗ ನೆರೆದಿದ್ದ ಸಾವಿರಾರು ಅಭಿಮಾನಿಗಳ ಮುಂದೆ ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಟ್ರೋಫಿ ಎತ್ತಿ ಹಿಡಿಯುತ್ತಿರುವ ದೃಶ್ಯ ಅತ್ಯಂತ ಸ್ಮರಣೀಯ ಎಂದು ಮಾಜಿ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 26 May 2019, 2:34 pm
ಹೊಸದಿಲ್ಲಿ: ಭಾರತದ ವಿಶ್ವಕಪ್ ವಿಜೇತ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್, ವಿಶ್ವಕಪ್ ಗೆಲುವಿನ ಸ್ಮರಣೀಯ ಕ್ಷಣದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
Vijaya Karnataka Web kapil-dev


1983ರಲ್ಲಿ ಭಾರತ ಚೊಚ್ಚಲ ಬಾರಿಗೆ ವಿಶ್ವಕಪ್ ಕಿರೀಟ ಗೆದ್ದಾಗ ಟ್ರೋಫಿಯನ್ನು ನಾಯಕ ಕಪಿಲ್ ದೇವ್ ಎತ್ತಿ ಹಿಡಿಯುತ್ತಿರುವುದು ಅತ್ಯಂತ ರೋಚಕ ಕ್ಷಣ ಎಂದಿದ್ದಾರೆ.

ವೆಸ್ಟ್ಇಂಡೀಸ್ ದಿಗ್ಗಜ ವಿವಿಯನ್ ರಿಚರ್ಡ್ಸ್ ವಿಕೆಟ್ ಟರ್ನಿಂಗ್ ಪಾಯಿಂಟ್ ಆಗಿತ್ತು ಎಂದು ನೆನಪಿಸಿಕೊಂಡರು. ಬಳಿಕ ನೆರೆದಿದ್ದ ಸಾವಿರಾರು ಅಭಿಮಾನಿಗಳ ಮುಂದೆ ಪ್ರಶಸ್ತಿ ಎತ್ತಿ ಹಿಡಿಯುತ್ತಿರುವ ದೃಶ್ಯ ಮನದಾಳದಲ್ಲಿದೆ ಎಂದು ಸ್ಮರಿಸಿದರು.

ಈಗಿನ ಭಾರತೀಯ ತಂಡದ ಬಗ್ಗೆ ಪ್ರತಿಕ್ರಿಯಿಸಿದ ಗವಾಸ್ಕರ್, ಅತ್ಯುತ್ತಮ ಸಂಯೋಜನೆಯನ್ನು ಹೊಂದಿದೆ ಎಂದರು. ಅದೇ ಹೊತ್ತಿಗೆ ಪ್ರತಿಯೊಂದು ತಂಡಗಳು ಪ್ರಶಸ್ತಿ ರೇಸ್‌ನಲ್ಲಿದೆ ಎಂಬುದನ್ನು ಉಲ್ಲೇಖಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌