ಆ್ಯಪ್ನಗರ

ವಿಶ್ವಕಪ್‌ಗೆ ಪರ್ಯಟನೆಗೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ಕೋಚ್‌ಗಳು

ಟೀಮ್ ಇಂಡಿಯಾದ ವಿಶ್ವಕಪ್ ಪರ್ಯಟನೆಗೂ ಮುಂಚಿತವಾಗಿ ಕೋಚ್‌ಗಳಾದ ರವಿಶಾಸ್ತ್ರಿ, ಭರತ್ ಅರುಣ್ ಹಾಗೂ ಆರ್ ಶ್ರೀಧರ್ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿಯಾಗಿ ಗೆಲುವಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.

Vijaya Karnataka Web 21 May 2019, 4:07 pm
ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಟೀಮ್ ಇಂಡಿಯಾ ತರಬೇತುದಾರರು ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
Vijaya Karnataka Web team-india-coach


ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ ಮೇ 21ರಂದು ಮಧ್ಯರಾತ್ರಿ ಪ್ರಯಾಣ ಬೆಳೆಸುತ್ತಿದೆ.

ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಈ ಸಂಬಂಧ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನ ಕೋಚ್ ರವಿಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ಕೂಡಾ ಜತೆಗಿದ್ದರು.

ಬಹುನಿರೀಕ್ಷಿತ ಏಕದಿನ ವಿಶ್ವಕಪ್‌ಗೆ ಮೇ 30ರಂದು ಚಾಲನೆ ದೊರಕಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಜೂನ್ 5ರಂದು ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸಲಿದೆ.

ಇದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾರತ ಭಾಗವಹಿಸಲಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಆತಿಥೇಯ ಇಂಗ್ಲೆಂಡ್ ಹೊರತಾಗಿ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ ಫೇವರಿಟ್ ಹಣೆಪಟ್ಟಿ ಕಟ್ಟಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌