ಆ್ಯಪ್ನಗರ

ವಿವಾದಾತ್ಮಕ ತೀರ್ಪಿಗೆ ಬಲಿ; ಗರಂ ಆದ ಕೊಹ್ಲಿ

ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ. ಟ್ರೆಂಟ್ ಬೌಲ್ಟ್ ದಾಳಿಯಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿದ ವಿರಾಟ್ ಕೇವಲ 1 ರನ್ನಿಗೆ ಔಟಾಗಿದ್ದಾರೆ.

Vijaya Karnataka Web 10 Jul 2019, 5:27 pm
ಮ್ಯಾಂಚೆಸ್ಟರ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ.
Vijaya Karnataka Web virat-kohli-out-01


ಮಂಗಳವಾರ ನಡೆಯಬೇಕಾಗಿದ್ದ ಪಂದ್ಯವನ್ನು ಮಳೆಯಿಂದಾಗಿ ಬುಧವಾರದಂದು ಮುಂದುವರಿಸಲಾಗಿತ್ತು. ಇದರಂತೆ 211/5 ಎಂಬಲ್ಲಿದ್ದ ಬ್ಯಾಟಿಂಗ್ ಮುಂದುವರಿಸಿದ ಕಿವೀಸ್ ಎಂಟು ವಿಕೆಟ್ ನಷ್ಟಕ್ಕೆ 239 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.

ಬಳಿಕ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. 5 ರನ್ ಗಳಿಸುವುದರಡೆಗೆ ಇನ್ ಫಾರ್ಮ್ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ವಿಕೆಟುಗಳನ್ನು ಕಳೆದುಕೊಳ್ಳುವ ಮೂಲಕ ತೀವ್ರ ಸಂಕಷ್ಟಕ್ಕೊಳಗಾಗಿತ್ತು.

ಈ ಪೈಕಿ ಟ್ರೆಂಟ್ ಬೌಲ್ಟ್ ದಾಳಿಯಲ್ಲಿ ನಾಯಕ ವಿರಾಟ್ ಕೊಹ್ಲಿ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದರು. ಭಾರತ ಇನ್ನಿಂಗ್ಸ್‌ನ 2.4ನೇ ಓವರ್‌ನಲ್ಲಿ ಘಟನೆ ನಡೆದಿತ್ತು. ಬೌಲ್ಟ್ ದಾಳಿ ನೇರವಾಗಿ ವಿರಾಟ್ ಕಾಲಿಗೆ ಬಡಿದಿತ್ತು. ಬಳಿಕ ಬೌಲರ್ ಮನವಿ ಪುರಸ್ಕರಿಸಿದ ಅಂಪೈರ್ ಔಟ್ ನೀಡಿದರು.

ತಕ್ಷಣ ಸಹ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಜತೆ ಸಮಾಲೋಚಿಸಿದ ವಿರಾಟ್ ಡಿಆರ್‌ಎಸ್ ಮೊರೆ ಹೋಗಲು ನಿರ್ಧರಿಸಿದರು. ಬಳಿಕ ಥರ್ಡ್ ಅಂಪೈರ್ ಮೇಲ್ಮನವಿ ಪರಿಶೀಲಿಸಿದಾಗ ಚೆಂಡು ವಿಕೆಟ್ ತುದಿಯಲ್ಲಿ ಬೇಲ್ಸ್‌ಗಷ್ಟೇ ಬಡಿಯುತ್ತಿತ್ತು. ಆದರೆ ಆನ್ ಫೀಲ್ಡ್ ಅಂಪೈರ್ ಔಟ್ ನೀಡಿದ್ದರಿಂದ ಅಂಪೈರ್ಸ್ ಕಾಲ್ ತೀರ್ಪನ್ನು ಕಾಯ್ದುಕೊಳ್ಳಲಾಯಿತು.

ಪ್ರಸ್ತುತ ಹೈ ವೋಲ್ಟೇಜ್ ಪಂದ್ಯದಲ್ಲಿನ ವಿವಾದಾತ್ಮಕ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಬಳಿಕ ನಾಯಕ ವಿರಾಟ್ ಕೊಹ್ಲಿ ಆಕ್ರೋಶಕ್ಕೆ ವ್ಯಕ್ತಪಡಿಸುತ್ತಲೇ ಪೆವಿಲಿಯನ್‌ಗೆ ಹಿಂತಿರುಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌