ಆ್ಯಪ್ನಗರ

ವಿಶ್ವಕಪ್‌ನಲ್ಲಿ ವಿರಾಟ್ ನಾಯಕತ್ವಕ್ಕೆ ನೈಜ ಅಗ್ನಿಪರೀಕ್ಷೆ

ಮುಂಬರುವ 2019 ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಗೆ ನೈಜ ಅಗ್ನಿ ಪರೀಕ್ಷೆ ಎದುರಾಗಲಿದೆ. ಈ ನಿಟ್ಟಿನಲ್ಲಿ ವಿರಾಟ್ ನಾಯಕತ್ವದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Vijaya Karnataka Web 18 May 2019, 6:01 pm
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಟೀಮ್ ಇಂಡಿಯಾವನ್ನು ಉತ್ತಮ ಮಟ್ಟದಲ್ಲಿಯೇ ವಿರಾಟ್ ಕೊಹ್ಲಿ ಮುನ್ನಡೆಸಿದ್ದಾರೆ.

ಆದರೆ ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ವಿರಾಟ್ ನಾಯಕತ್ವಕ್ಕೆ ನೈಜ ಅಗ್ನಿಪರೀಕ್ಷೆ ಎದುರಾಗಲಿದೆ. ಆಗಲೇ ಅಂಡರ್-19 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತಕ್ಕೆ ವಿಶ್ವಕಪ್ ದೊರಕಿಸಿಕೊಟ್ಟಿರುವ ಕೊಹ್ಲಿಗೆ ಮುಂದೆ ಸಾಲು ಸಾಲು ಸವಾಲುಗಳು ಹುಟ್ಟಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಪ್ ಗೆಲ್ಲಲು ಸಾಧ್ಯವಾಗದೇ ಇದ್ದರೂ ವಿಶ್ವಕಪ್ ಚುಟುಕು ಕ್ರಿಕೆಟ್‌ಗಿಂತಲೂ ಸಂಪೂರ್ಣ ವಿಭಿನ್ನವಾದ ಟೂರ್ನಿಯಾಗಿರಲಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಅಷ್ಟೇ ಯಾಕೆ ಅಂತರಾಷ್ಟ್ರೀಯ ಕ್ರಿಕೆಟ್ ಶ್ರೇಯಾಂಕದಲ್ಲಿ ಭಾರತ ನಂ.2 ಸ್ಥಾನವನ್ನು ಕಾಪಾಡಿಕೊಂಡಿದೆ. ಹಾಗಾಗಿ ಕನಿಷ್ಠ ಸೆಮಿಫೈನಲ್ ತಲುಪುವುದು ಕೊಹ್ಲಿ ತಂಡದ ಪಾಲಿಗೆ ಕಷ್ಟಕರವೆನಿಸಲ್ಲ.

ಆದರೆ ಅಲ್ಲಿಂದ ಬಳಿಕ ನೈಜ ನಾಲ್ಕು ತಂಡಗಳ ನಡುವೆ ಪ್ರಶಸ್ತಿಗಾಗಿ ಹಣಾಹಣಿ ನಡೆಯಲಿದೆ. ಎಲ್ಲ ಒತ್ತಡಗಳನ್ನು ನಿಭಾಯಿಸಲು ಕೊಹ್ಲಿ ಹೇಗೆ ಯಶಸ್ವಿಯಾಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ.

ಒಟ್ಟಾರೆಯಾಗಿ ಕಪಿಲ್ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ಸಾಧನೆಯನ್ನು ಪುನರಾವರ್ತಿಸಿ ಇತಿಹಾಸದ ಪುಟ ಸೇರಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌