ಆ್ಯಪ್ನಗರ

ವರುಣನ ಅವಕೃಪೆ; ಯಾರಿಗೆ ಲಾಭ? ಯಾರಿಗೆ ನಷ್ಟ?

ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ರದ್ದುಗೊಂಡಿರುವುದು ಭಾರತಕ್ಕೆ ನಷ್ಟವೆಂದೇ ಕ್ರಿಕೆಟ್ ತಜ್ಞರು ಅಭಿಪ್ರಾಯಪಡುತ್ತಾರೆ. ಇನ್ನೊಂದೆಡೆ ಈಗಾಗಲೇ ಮೂರು ಗೆಲುವು ದಾಖಲಿಸಿರುವ ಕಿವೀಸ್ ಅಗ್ರಸ್ಥಾನದಲ್ಲಿದೆ.

Vijaya Karnataka Web 13 Jun 2019, 8:51 pm
ನಾಟಿಂಗ್‌ಹ್ಯಾಮ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದರಿಂದಾಗಿ ಇತ್ತಂಡಗಳಿಗೂ ತಲಾ ಒಂದು ಅಂಕವನ್ನು ಹಂಚಿಕೊಳ್ಳಲಾಗಿದೆ.
Vijaya Karnataka Web umpires


ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ ಆಡಿದ ಪಂದ್ಯಗಳಲ್ಲ ಸೋಲನ್ನು ಕಂಡಿಲ್ಲ. ನ್ಯೂಜಿಲೆಂಡ್ ಆಗಲೇ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಭಾರತ ಕೂಡಾ ತಾನಾಡಿದ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

ಸಹಜವಾಗಿಯೇ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲರುವುದರಿಂದ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ರದ್ದುಕೊಂಡಿರುವುದು ಭಾರತಕ್ಕೆ ಅಲ್ಪ ಹಿನ್ನಡೆಯನ್ನುಂಟು ಮಾಡಿದೆ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಇದೀಗ ಸೆಮಿಫೈನಲ್ ಪ್ರವೇಶಿಸಲು ಮುಂದಿನ ಆರು ಪಂದ್ಯಗಳಲ್ಲಿ ಮೂರು ಅಥವಾ ನಾಲ್ಕು ಪಂದ್ಯಗಳನ್ನು ಗೆಲ್ಲಬೇಕಿದೆ. ಅತ್ತ ನ್ಯೂಜಿಲೆಂಡ್ ಈಗಾಗಲೇ ಏಳು ಅಂಕಗಳನ್ನು ಸಂಪಾದಿಸಿದ್ದು, ಸೆಮಿಫೈನಲ್‌ನತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ.

ಇನ್ನೊಂದೆಡೆ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯವು ರದ್ದುಗೊಂಡಿರುವುದು ಅಭಿಮಾನಿಗಳಲ್ಲೂ ಹೆಚ್ಚಿನ ನಿರಾಸೆಯನ್ನುಂಟು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌