ಆ್ಯಪ್ನಗರ

ರಾಜಕೀಯಕ್ಕೆ ಅಲ್ಪ ವಿರಾಮ; ಚಿನ್ನಸ್ವಾಮಿಯಲ್ಲಿ ಎಬಿಡಿ ಶೋ

ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2018ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ.

Vijaya Karnataka Web 17 May 2018, 9:23 pm
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2018ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ.
Vijaya Karnataka Web ab-de-villiers-16


ಒಂದೆಡೆ ರಾಜ್ಯ ರಾಜಧಾನಿಯಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿರುವಂತೆಯೇ ಅತ್ತ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಬಿಡಿ ಅಮೋಘ ಬ್ಯಾಟಿಂಗ್ ವೈಭವ ಪ್ರದರ್ಶಿಸಿದರು.

ಟಾಸ್ ಸೋತು ಬ್ಯಾಟಿಂಗ್‌ಗಿಳಿಸಲ್ಪಟ್ಟಿದ್ದ ಆರ್‌ಸಿಬಿ ಆರಂಭಿಕ ಆಘಾತಕ್ಕೊಳಗಾಗಿತ್ತು. ಆದರೆ ಮೂರನೇ ವಿಕೆಟ್‌ಗೆ ಮೊಯಿನ್ ಆಲಿ ಜತೆ ಮಹತ್ವದ ಜತೆಯಾಟದ ಕಟ್ಟಿದ ವಿಲಿಯರ್ಸ್ ಆಸೆರೆಯಾದರು.

ಈ ಮೂಲಕ ಐಪಿಎಲ್ 11ರಲ್ಲಿ ಐದನೇ ಅರ್ಧಶತಕ ಶತಕ ಸಾಧನೆ ಮಾಡಿದರು. ವಿಲಿಯರ್ಸ್ ಫಿಫ್ಟಿ 32 ಎಸೆತಗಳಲ್ಲೇ ದಾಖಲಾಗಿದ್ದವು.

ಈ ಪೈಕಿ ವಿಲಿಯರ್ಸ್ ಹೊಡೆದ ಏಕ ಮಾತ್ರ ಸಿಕ್ಸರ್ ನೇರವಾಗಿ ಸ್ಟೇಡಿಯಂ ಹೊರಗಡೆಗೆ ತೇಲಿತ್ತು. ಅಂತಿಮವಾಗಿ ರಾಶೀದ್ ಖಾನ್ ಅವರ ಎಸೆತದಲ್ಲಿ ಬೌಂಡರಿ ಗೆರೆಯಲ್ಲಿ ಶಿಖರ್ ಧವನ್ ಅದ್ಭುತ ಕ್ಯಾಚ್‌ಗೆ ಬಲಿಯಾದರು.

39 ಎಸೆತಗಳನ್ನು ಎದುರಿಸಿದ ವಿಲಿಯರ್ಸ್ 12 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 69 ರನ್ ಗಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌